ನವದೆಹಲಿ: ಯುನೈಟೆಡ್ ಕಿಂಗ್ಡಂನಲ್ಲಿ ಹಿಂದೂಗಳಿಗಾಗಿ ಇರುವ ನ್ಯಾಷನಲ್ ಅಂಬ್ರೆಲ್ಲಾ ಸಂಸ್ಥೆಗಳ ಪ್ರತಿನಿಧಿಗಳು ಪ್ರಧಾನಿ ಬೋರಿಸ್ ಜಾನ್ಸನ್ಗೆ ಪತ್ರವೊಂದನ್ನು ಬರೆದಿದ್ದು, ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ಸರ್ಕಾರಿ ವಿಚಾರಣೆಯನ್ನು ನಡೆಸುವಂತೆ ಕೋರಿದ್ದಾರೆ.
ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಸಾವಿರಾರು ಮತಾಂಧರ ಗುಂಪು 2020 ರ ಡಿಸೆಂಬರ್ 30 ರಂದು ಪಾಕಿಸ್ಥಾನದ ಖೈಬರ್-ಪಖ್ತುನ್ಖ್ವಾ ಪ್ರದೇಶದಲ್ಲಿ ಹಿಂದೂ ದೇವಾಲಯವೊಂದನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ.
ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ಥಾನ ಸರ್ಕಾರದಿಂದ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಕ್ರಮ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸುವಂತೆ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಪತ್ರದಲ್ಲಿ ಯುಕೆಯ ಎಲ್ಲಾ ಪ್ರಮುಖ ಹಿಂದೂ ಸಂಘಟನೆಗಳು ಕೇಳಿಕೊಂಡಿವೆ.
“ಯುಕೆಯಲ್ಲಿ ಹಿಂದೂಗಳಿಗಾಗಿ ನ್ಯಾಷನಲ್ ಅಂಬ್ರೆಲ್ಲಾ ಸಂಸ್ಥೆಗಳ ಪ್ರತಿನಿಧಿಗಳಾದ ನಾವು ಪಾಕಿಸ್ಥಾನದಲ್ಲಿ ಹಿಂದೂಗಳ ಅತಿರೇಕದ ಕಿರುಕುಳವನ್ನು ತಡೆಯಲು ಪಾಕಿಸ್ಥಾನದ ಪ್ರಧಾನ ಮಂತ್ರಿ ಮುಂದಾಗುವಂತೆ ಒತ್ತಾಯಿಸಲು ನಿಮ್ಮ ತುರ್ತು ಕ್ರಮವನ್ನು ಬಯಸುತ್ತಿದ್ದೇವೆ” ಎಂದು ಪತ್ರದಲ್ಲಿ ಹೇಳಲಾಗಿದೆ.
ಇಸ್ಲಾಮಿಕ್ ರಾಷ್ಟ್ರದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದು ಹಿಂದೂ ಗುಂಪುಗಳು ಆರೋಪಿಸಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಿಂದೂಗಳಂತಹ ಅಲ್ಪಸಂಖ್ಯಾತರ ಪರಿಸ್ಥಿತಿ ಅಪಾಯವನ್ನು ಎದುರಿಸುತ್ತಿದೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.