ನವದೆಹಲಿ: 2016 ರಲ್ಲಿ ಪ್ರಾರಂಭವಾದ ಪಿಎಂ ಫಸಲ್ ಬಿಮಾ ಯೋಜನೆ ಇಂದು ಐದು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಫಲಾನುಭವಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಈ ಯೋಜನೆಯು ವ್ಯಾಪ್ತಿಯನ್ನು ಹೆಚ್ಚಿಸಿದೆ, ಅಪಾಯವನ್ನು ಕಡಿಮೆ ಮಾಡಿದೆ ಮತ್ತು ಕೋಟ್ಯಂತರ ರೈತರಿಗೆ ಲಾಭದಾಯಕವಾಗಿದೆ ಎಂದು ಮೋದಿ ಅಭಿಪ್ರಾಯಿಸಿದ್ದಾರೆ.
“ಕಷ್ಟಪಟ್ಟು ದುಡಿಯುವ ರೈತರನ್ನು ಪ್ರಾಕೃತಿಕ ವಿಕೋಪಗಳಿಂದ ರಕ್ಷಿಸುವ ಪ್ರಮುಖ ಉಪಕ್ರಮ ಪಿಎಂ ಫಸಲ್ ಬಿಮಾ ಯೋಜನೆ ಇಂದು 5 ವರ್ಷಗಳನ್ನು ಪೂರೈಸಿದೆ. ಯೋಜನೆ ವ್ಯಾಪ್ತಿಯನ್ನು ಹೆಚ್ಚಿಸಿದೆ, ಅಪಾಯವನ್ನು ತಗ್ಗಿಸಿದೆ ಮತ್ತು ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡಿದೆ. ಯೋಜನೆಯ ಎಲ್ಲಾ ಫಲಾನುಭವಿಗಳನ್ನು ನಾನು ಅಭಿನಂದಿಸುತ್ತೇನೆ”ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಬೇಕೆಂದು ಒತ್ತಾಯಿಸಿದರು. “ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆಯು 5 ವರ್ಷಗಳನ್ನು ಪುರೈಸಿದ್ದು ನಿಮ್ಮೆಲ್ಲರಿಗೂ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ಬೆಳೆಗಳಿಗೆ ನೀವು ಇನ್ನೂ ವಿಮೆ ಮಾಡದಿದ್ದರೆ, ಇಂದು ನಿಮ್ಮ ಬೆಳೆ ವಿಮೆ ಮಾಡಿಕೊಳ್ಳಿ ಎಂದು ನಾನು ಎಲ್ಲಾ ಕೃಷಿ ಸಹೋದರರನ್ನು ಒತ್ತಾಯಿಸಲು ಬಯಸುತ್ತೇನೆ ”ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಪ್ರಕಾರ, ಪ್ರತಿವರ್ಷ 5.5 ಕೋಟಿಗೂ ಹೆಚ್ಚು ರೈತರ ಅರ್ಜಿಗಳನ್ನು ಪಿಎಂ ಫಸಲ್ ಬಿಮಾ ಯೋಜನೆ (ಪಿಎಂಎಫ್ಬಿವೈ) ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತದೆ.
देश के अन्नदाताओं को प्रकृति के प्रकोप से सुरक्षा प्रदान करने वाली पीएम फसल बीमा योजना के आज 5 साल पूरे हो गए हैं। इस स्कीम के तहत नुकसान का कवरेज बढ़ने और जोखिम कम होने से करोड़ों किसानों को लाभ हुआ है। इसके सभी लाभार्थियों को मेरी बहुत-बहुत बधाई। #FasalBima4SafalKisan
— Narendra Modi (@narendramodi) January 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.