ನವದೆಹಲಿ: ಈ ವರ್ಷದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕರ್ನಾಟಕವು ವಿಜಯನಗರ ಸಾಮ್ರಾಜ್ಯದ ಸಾಂಸ್ಕೃತಿಕ ಮತ್ತು ಕಲಾತ್ಮಕ ಶ್ರೀಮಂತಿಕೆಯನ್ನು ತೋರಿಸುವ ಟ್ಯಾಬ್ಲೋ ಪ್ರದರ್ಶಿಸಲಿದೆ ಎಂದು ಮೂಲಗಳು ವರದಿ ಮಾಡಿವೆ.
ಟ್ಯಾಬ್ಲೋದಲ್ಲಿ, ಕಲಾವಿದರು ಕೃಷ್ಣದೇವರಾಯರ ಸಿಂಹಾಸನ, ಹಂಪಿಯ ಶಿಲ್ಪಗಳು, ನರಸಿಂಹ ಮತ್ತು ವಿಠೋಬಾ ದೇವಾಲಯಗಳು ಮತ್ತು ಪ್ರಮುಖ ಸ್ತಂಭಗಳು ಮತ್ತು ಶಿಲ್ಪಗಳನ್ನು ಪ್ರದರ್ಶಿಸಲಿದ್ದಾರೆ.
ಈ ಟ್ಯಾಬ್ಲೋ ಮೂಲಕ, ಕರ್ನಾಟಕವು ಮಹಾನ್ ವಿಜಯನಗರ ಸಾಮ್ರಾಜ್ಯದ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಸಂಗೀತವನ್ನು ಪರಿಚಯಿಸಲು ಪ್ರಯತ್ನಿಸುತ್ತದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿದ್ದಾಗ, ಟಿಪ್ಪು ಸುಲ್ತಾನನನ್ನು ಗಣರಾಜ್ಯೋತ್ಸವದಲ್ಲಿ ಪ್ರತಿಬಿಂಬಿಸಲಾಗಿತ್ತು.
ಮೈಸೂರು ಆಡಳಿತಗಾರನಾಗಿದ್ದ ಟಿಪ್ಪು ಸುಲ್ತಾನ ತನ್ನ ಆಡಳಿತದ ಅವಧಿಯಲ್ಲಿ ಹಿಂದುಗಳ ಹತ್ಯಾಕಾಂಡ, ದೇಗುಲ ಧ್ವಂಸದಂತಹ ಕೃತ್ಯಗಳನ್ನು ಎಸಗಿದ್ದ. ಆತನ ಕಳಂಕಿತ ಪರಂಪರೆಯನ್ನು ಕಾಂಗ್ರೆಸ್ ವೈಭವೀಕರಿಸುವ ಪ್ರಯತ್ನವನ್ನು ಮಾಡಲಾಗಿತ್ತು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಆದರೆ ಈಗ ಯಡಿಯೂರಪ್ಪ ಸರಕಾರ ವಿಜಯನಗರ ಸಾಮ್ರಾಜ್ಯದ ವೈಭವವನ್ನು ರಾಷ್ಟ್ರರಾಜಧಾನಿಯಲ್ಲಿ ಬಿಂಬಿಸಲು ಸಜ್ಜಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.