ನವದೆಹಲಿ: ಮಕರ ಸಂಕ್ರಾಂತಿ ಹಬ್ಬವನ್ನು ಇಂದು ದೇಶದಾದ್ಯಂತ ಬೇರೆ ಬೇರೆ ಹೆಸರುಗಳಿಂದ ಆಚರಿಸಲಾಗುತ್ತಿದೆ. ಇದನ್ನು ತಮಿಳುನಾಡಿನಲ್ಲಿ ಪೊಂಗಲ್, ಗುಜರಾತ್ನಲ್ಲಿ ಉತ್ತರಾಯಣ್, ಅಸ್ಸಾಂನಲ್ಲಿ ಬಿಹು ಮತ್ತು ಪಶ್ಚಿಮ ಬಂಗಾಳದಲ್ಲಿ ಪೌಶ್ ಸಂಗ್ರಾಂತಿ ಎಂದು ಆಚರಿಸಲಾಗುತ್ತದೆ.
ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸುಭ ಕೋರಿದ್ದಾರೆ.
ಈ ಹಬ್ಬಗಳು ನಮ್ಮ ಸಮಾಜದಲ್ಲಿ ಪ್ರೀತಿ, ವಾತ್ಸಲ್ಯ ಮತ್ತು ಸಾಮರಸ್ಯದ ಬಾಂಧವ್ಯವನ್ನು ಬಲಪಡಿಸಲಿ ಮತ್ತು ದೇಶದಲ್ಲಿ ಸಮೃದ್ಧಿ ಮತ್ತು ಸಂತೋಷವನ್ನು ಹೆಚ್ಚಿಸಲಿ ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಸಂದೇಶದಲ್ಲಿ ಹಾರೈಸಿದ್ದಾರೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು, ಈ ಹಬ್ಬಗಳು ಬಣ್ಣಕ್ಕೆ ಹೆಸರುವಾಸಿಯಾಗಿದೆ ಮತ್ತು ಉತ್ತಮ ಸುಗ್ಗಿಯ ಮತ್ತು ಪ್ರಕೃತಿಯ ಸಮೃದ್ಧಿಯನ್ನು ಸಂಕೇತಿಸುತ್ತದೆ ಎಂದಿದ್ದಾರೆ.
ಉತ್ತರಾಯಣ ಸೂರ್ಯ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಪೊಂಗಲ್ ಹಬ್ಬಕ್ಕೆ ಅವರು ತಮಿಳಿನಲ್ಲಿ ಶುಭ ಕೋರಿದ್ದಾರೆ.
Makar Sankranti is marked with enthusiasm in several parts of India. This auspicious festival illustrates India’s diversity and the vibrancy of our traditions. It also reaffirms the importance of respecting Mother Nature.
— Narendra Modi (@narendramodi) January 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.