ನವದೆಹಲಿ: ಸೆಪ್ಟಂಬರ್ ತಿಂಗಳಿನಲ್ಲಿ ಪಾಕಿಸ್ಥಾನದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಸಂಸದೀಯ ಒಕ್ಕೂಟ ಸಭೆ(Commonwealth Parliamentary Association conference)ಗೆ ಹಾಜರಾಗುವಂತೆ ಜಮ್ಮು ಕಾಶ್ಮೀರ ಸ್ಪೀಕರ್ ಅವರಿಗೆ ಆಹ್ವಾನವನ್ನು ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ಈ ಸಭೆಯನ್ನು ಬಹಿಷ್ಕರಿಸಲು ಕೇಂದ್ರ ನಿರ್ಧರಿಸಿದೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಎಲ್ಲಾ ರಾಜ್ಯಗಳ ಸ್ಪೀಕರ್ಗಳ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಪಂಜಾಬ್ ಮತ್ತು ಜಮ್ಮು ಕಾಶ್ಮೀರದಲ್ಲಿ ಇತ್ತೀಚಿಗೆ ನಡೆದ ಭಯೋತ್ಪಾದಕ ದಾಳಿ ಎರಡು ದೇಶಗಳ ನಡುವೆ ಮತ್ತೆ ಬಿರುಕು ಮೂಡಿಸಿದೆ. ಅದರ ಬೆನ್ನಲ್ಲೇ ಸಭೆ ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಪಾಕಿಸ್ಥಾನಕ್ಕೆ ದಿಟ್ಟ ಸಂದೇಶ ರವಾನಿಸುವ ಉದ್ದೇಶ ಇದರ ಹಿಂದಿದೆ.
ಸೆಪ್ಟಂಬರ್ 30ರಿಂದ ಅಕ್ಟೋಬರ್ ೮ರವರೆಗೆ ಇಸ್ಲಾಮಾಬಾದ್ನಲ್ಲಿ ಸಭೆ ನಡೆಯಲಿದೆ, ಜಮ್ಮು ಕಾಶ್ಮೀರ ಸ್ಪೀಕರ್ ಬಿಟ್ಟು ಭಾರತದ ಎಲ್ಲಾ ರಾಜ್ಯಗಳ ಸ್ಪೀಕರ್ಗಳನ್ನೂ ಇಲ್ಲಿಗೆ ಆಹ್ವಾನಿಸಲಾಗಿದೆ.
ಇದನ್ನು ಖಂಡಿಸಿ ಪಾಕಿಸ್ಥಾನದ ವಿರುದ್ಧ ಖಂಡನಾ ನಿರ್ಣಯವನ್ನೂ ಅಂಗೀಕರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.