ಬೆಂಗಳೂರು: ಭಾರತ ಎಂದಿಗೂ ಯುದ್ಧವನ್ನು ಬಯಸುವುದಿಲ್ಲ ಆದರೆ ಯಾವುದೇ ‘ಸೂಪರ್ ಪವರ್’ ದೇಶ ಭಾರತದ ಘನತೆಗೆ ಧಕ್ಕೆ ತರಲು ಪ್ರಯತ್ನಿಸಿದರೆ ನಮ್ಮ ಸೈನಿಕರು ಸೂಕ್ತ ಉತ್ತರ ನೀಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಚೀನಾದೊಂದಿಗಿನ ಎಂಟು ತಿಂಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
“ನಾವು ಯುದ್ಧವನ್ನು ಬಯಸುವುದಿಲ್ಲ ಮತ್ತು ನಾವು ಎಲ್ಲರ ಸುರಕ್ಷತೆಯನ್ನು ಕಾಪಾಡುವುದರವ ಪರವಾಗಿದ್ದೇವೆ ಆದರೆ ಯಾವುದೇ ಮಹಾಶಕ್ತಿ ನಮ್ಮ ಹೆಮ್ಮೆಗೆ ಧಕ್ಕೆ ತರಲು ಬಯಸಿದರೆ ನಮ್ಮ ಸೈನಿಕರು ಅವರಿಗೆ ಸೂಕ್ತವಾದ ಉತ್ತರವನ್ನು ನೀಡಲು ಸಮರ್ಥರಾಗಿದ್ದಾರೆ ಎಂದು ನಾನು ಸ್ಪಷ್ಟವಾಗಿ ಹೇಳಬಯಸುತ್ತೇನೆ” ಎಂದಿದ್ದಾರೆ.
“ಭಾರತವು ಯಾವುದೇ ರಾಷ್ಟ್ರದೊಂದಿಗೆ ಸಂಘರ್ಷವನ್ನು ಬಯಸುವುದಿಲ್ಲ ಮತ್ತು ತನ್ನ ನೆರೆಹೊರೆಯವರೊಂದಿಗೆ ಶಾಂತಿ ಮತ್ತು ಸ್ನೇಹ ಸಂಬಂಧವನ್ನು ಉಳಿಸಿಕೊಳ್ಳಲು ಆದ್ಯತೆ ನೀಡುತ್ತೇವೆ” ಎಂದಿದ್ದಾರೆ.
“ಭಾರತ ಯಾವಾಗಲೂ ತನ್ನ ನೆರೆಹೊರೆಯವರೊಂದಿಗೆ ಶಾಂತಿ ಮತ್ತು ಸ್ನೇಹ ಸಂಬಂಧವನ್ನು ಬಯಸುತ್ತದೆ ಏಕೆಂದರೆ ಅದು ನಮ್ಮ ರಕ್ತ ಮತ್ತು ಸಂಸ್ಕೃತಿಯಲ್ಲಿದೆ” ಎಂದು ಅವರು ಬೆಂಗಳೂರಿನಲ್ಲಿರುವ ಭಾರತೀಯ ವಾಯುಪಡೆಯ ಪ್ರಧಾನ ಕಛೇರಿಯಲ್ಲಿ ನಡೆದ ಐದನೇ ಸಶಸ್ತ್ರ ಪಡೆಗಳ ಹಿರಿಯರ ದಿನಾಚರಣೆಯಲ್ಲಿ ಹೇಳಿದರು.
ಚೀನಾದೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿದ ಅವರು, ಭಾರತೀಯ ಸೈನಿಕರು ಅನುಕರಣೀಯ ಧೈರ್ಯ ಮತ್ತು ತಾಳ್ಮೆಯನ್ನು ಪ್ರದರ್ಶಿಸಿದರು ಮತ್ತು ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆ ಪಡುತ್ತಾನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.