ವಾಷಿಂಗ್ಟನ್: ಭಾರತ ಸರ್ಕಾರವು ಜಾರಿಗೆ ತಂದಿರುವ ಕೃಷಿ ಕಾನೂನುಗಳು ಕೃಷಿ ಸುಧಾರಣೆಯಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುವ ಸಾಮರ್ಥ್ಯವನ್ನು ಹೊಂದಿವೆ. ಆದರೆ ಹೊಸ ವ್ಯವಸ್ಥೆಗೆ ತೆರೆದುಕೊಳ್ಳುವ ಪರಿವರ್ತನೆಯ ಸಮಯದಲ್ಲಿ ಜನರಿಗೆ ಸಾಮಾಜಿಕ ಸುರಕ್ಷತೆಯನ್ನು ಖಚಿತಪಡಿಸುವ ಅಗತ್ಯವಿದೆ ಎಂದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.
ಹೊಸ ಕೃಷಿ ಕಾನೂನು ಮಧ್ಯವರ್ತಿಗಳ ಪಾತ್ರವನ್ನು ಕಡಿಮೆ ಮಾಡುತ್ತದೆ ಮತ್ತು ದಕ್ಷತೆಯನ್ನು ಹೆಚ್ಚಿಸುತ್ತದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಸಂವಹನ ನಿರ್ದೇಶಕ ಗೆರ್ರಿ ರೈಸ್ ಹೇಳಿದ್ದಾರೆ.
“ಕೃಷಿ ಮಸೂದೆಗಳು ಭಾರತದಲ್ಲಿ ಕೃಷಿ ಸುಧಾರಣೆಗಳಿಗಾಗಿ ಮಹತ್ವದ ಹೆಜ್ಜೆಯನ್ನು ಪ್ರತಿನಿಧಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ನಾವು ನಂಬುತ್ತೇವೆ” ಎಂದು ರೈಸ್ ಗುರುವಾರ ವಾಷಿಂಗ್ಟನ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
“ಈ ಕಾಯ್ದೆಗಳಿಂದ ರೈತರಿಗೆ ನೇರವಾಗಿ ಮಾರಾಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಾಗುತ್ತದೆ, ಮಧ್ಯವರ್ತಿಗಳ ಪಾತ್ರವನ್ನು ಕಡಿಮೆ ಮಾಡುವ ಮೂಲಕ ರೈತರಿಗೆ ಹೆಚ್ಚುವರಿ ಪಾಲನ್ನು ಉಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ, ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಗ್ರಾಮೀಣ ಬೆಳವಣಿಗೆಯನ್ನು ಬೆಂಬಲಿಸುತ್ತದೆ” ಎಂದು ಅವರು ಹೇಳಿದರು.
“ಆದರೆ, ಈ ಹೊಸ ವ್ಯವಸ್ಥೆಗೆ ಪರಿವರ್ತನೆಯಾಗುವ ಸಮಯದಲ್ಲಿ ಪ್ರತಿಕೂಲ ಪರಿಣಾಮ ಎದುರಿಸುವವರನ್ನು ಸಾಮಾಜಿಕ ಸುರಕ್ಷತಾ ಜಾಲವು ಸಮರ್ಪಕವಾಗಿ ರಕ್ಷಿಸುವುದು ಬಹಳ ಮುಖ್ಯ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.