ದಾವಣಗೆರೆ: ರಾಜ್ಯದಲ್ಲಿ ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಆರಂಭ ಮಾಡಲಾಗುವುದು. ವಾಯುಮಾಲಿನ್ಯ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿಯೂ ಎಲೆಕ್ಟ್ರಿಕ್ ಬಸ್ಗಳ ಸಂಚಾರ ಹೆಚ್ಚು ಪೂರಕವಾಗಿದ್ದು, ಈ ಹಿನ್ನೆಲೆಯಲ್ಲಿ ಇಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ಸುಗಳನ್ನು ತಯಾರಿಸಿ ಕೊಡಲು ವಿದೇಶೀ ಕಂಪೆನಿಗಳು ಸಿದ್ಧವಿದೆ. ಒಂದು ಎಲೆಕ್ಟ್ರಿಕ್ ಬಸ್ ಖರೀದಿಗೆ 2 ಕೋಟಿ ರೂ. ಗಳಷ್ಟು ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರ ಖರೀದಿಸುವವರಿಗೆ 55 ಲಕ್ಷ ರೂ. ಗಳ ರಿಯಾಯಿತಿಯನ್ನು ನೀಡಲಿರುವುದಾಗಿ ಸವದಿ ಹೇಳಿದ್ದಾರೆ.
ಈ ಬಸ್ಸುಗಳನ್ನು ಖರೀದಿ ಮಾಡಿದ ಸಂಸ್ಥೆ ಬಸ್ಸುಗಳನ್ನು ರಾಜ್ಯದ ಸಾರಿಗೆ ಇಲಾಖೆಗೆ ನೀಡಲಿದ್ದು, ಸಾರಿಗೆ ಇಲಾಖೆಯು ಆ ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಬಳಕೆ ಮಾಡಲಿದೆ. ಕಿಲೋ ಮೀಟರ್ ಲೆಕ್ಕದಲ್ಲಿ ಎಲೆಕ್ಟ್ರಿಕ್ ಬಸ್ಸುಗಳನ್ನು ಒದಗಿಸಿಕೊಟ್ಟ ಸಂಸ್ಥೆಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಸವದಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.