ಬೆಂಗಳೂರು: ರಾಜ್ಯದಲ್ಲಿನ ಪ್ರತಿ ತಾಲೂಕಿಗೆ ಎರಡರಂತೆ ಸರ್ಕಾರಿ ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುವುದು. ಖಾಸಗಿ ಗೋಶಾಲೆಗಳಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಹಾಗೆಯೇ ಪಶು ಚಿಕಿತ್ಸಾಲಯಗಳಿಗೆ ಸಂಬಂಧಿಸಿದಂತೆ 6000 ಪಶುವೈದ್ಯರನ್ನು ನೇಮಕ ಮಾಡುವುದಕ್ಕೆ ಪೂರಕ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ಹೇಳಿದ್ದಾರೆ.
ಇಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿನ ಪರಿಣಾಮಕಾರಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಹಾಗೆಯೇ ಗೋ ರಕ್ಷಣೆಯ ವಿಚಾರದಲ್ಲಿ ತೆಗೆದುಕೊಳ್ಳಬಹುದಾದ ಉಪಕ್ರಮಗಳ ಬಗೆಗೂ ಅವರು ಶ್ರೀಗಳೊಂದಿಗೆ ಸಮಾಲೋಚಿಸಿದರು.
ಇದೇ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಗೋಮಾಳದ ಭೂಮಿಗಳನ್ನು ಗೋಶಾಲೆಗಳಿಗೆ ಗುತ್ತಿಗೆ ನೀಡುವುದು, ದೇವಳಗಳು ಮತ್ತು ಸಹಕಾರ ಸಂಘಗಳ ಆದಾಯದ ಒಂದು ಅಂಶವನ್ನು ಗೋಶಾಲೆಗಳಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸುವುದಾಗಿಯೂ ಚೌಹಾಣ್ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ವಿಶೇಷ ಕಾಳಜಿ ವಹಿಸಿ, ಕಾರ್ಯ ನಿರ್ವಹಿಸಿದ ಸಚಿವ ಪ್ರಭು ಚೌಹಾಣ್ ಅವರನ್ನು ಸನ್ಮಾನಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.