ಬೆಂಗಳೂರು: ಅಪೌಷ್ಟಿಕತೆಗೆ ತುತ್ತಾಗಿ ಬಳಲುತ್ತಿರುವ ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ಶಿಬಿರಗಳ ಮೇಲೆ ನಿಗಾ ವಹಿಸುವಂತೆ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್ ಮರು ಸಮಿತಿ ರಚನೆ ಮಾಡಿದೆ.
ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ಈ ಸಮಿತಿಯನ್ನು ರಚನೆ ಮಾಡಿದೆ. ಕೊರೋನಾ ಸೋಂಕಿನ ನಂತರದಲ್ಲಿ ಅಂಗನವಾಡಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ರಾಜ್ಯದಲ್ಲಿ ಅಪೌಷ್ಟಿತೆಯ ಕೊರತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಈ ಅಂಶ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹೈ ಕೋರ್ಟ್ ಮರು ಸಮಿತಿ ರಚಿಸಿದೆ.
ಇದರ ನೇತೃತ್ವವನ್ನು ಹೈಕೋರ್ಟ್ನ ಮಾಜಿ ನ್ಯಾಯಾಧೀಶ ಎ ವೇಣುಗೋಪಾಲ ಗೌಡ ಅವರು ವಹಿಸಿಕೊಳ್ಳಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶಕರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು, ರಾಷ್ಟ್ರೀಯ ಸಾರ್ವಜನಿಕ ಸಹಕಾರ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ಮಾಜಿ ಪ್ರಾದೇಶಿಕ ನಿರ್ದೇಶಕರು, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ನಿರ್ದೇಶಕರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ- ಕಾರ್ಯದರ್ಶಿ ಮತ್ತು ವಕೀಲ ಕ್ಲಿಪ್ಟನ್ ಡಿ ರೊಜಾರಿಯೋ ಈ ಸಮಿತಿಯಲ್ಲಿ ಇರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.