ಬೆಂಗಳೂರು : ರಾಜ್ಯದ ಕೈಗಾರಿಕೆ ಮತ್ತು ಉದ್ಯಮ ವಲಯದಲ್ಲಿ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ಗುರಿ ಇದ್ದು, ಇದರಿಂದಾಗಿ ಸುಮಾರು 20 ಲಕ್ಷ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನುಡಿದಿದ್ದಾರೆ.
ಅವರು ನಗರದ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ‘ಕರ್ನಾಟಕ ಕೈಗಾರಿಕಾ ನೀತಿ- 2025’ ನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಈ ಬಾರಿ ಬೆಂಗಳೂರು ನಗರವನ್ನು ಹೊರತುಪಡಿಸಿದಂತೆ, ಉಳಿದ 2 ಮತ್ತು 3 ನೇ ಸ್ತರದ ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸಿದೆ. ಹಾಗೆಯೇ ಭೂ ಸುಧಾರಣಾ ಕಾಯ್ದೆಯ 79 ಎ ಮತ್ತು 79 ಬಿ ಸೆಕ್ಷನ್ಗಳನ್ನು ತೆಗೆದು ಹಾಕಲಾಗಿರುವುದರಿಂದ ರಾಜ್ಯದಲ್ಲಿ ಹೆಚ್ಚು ಹೆಚ್ಚು ಉದ್ಯಮಗಳ ಆರಂಭಕ್ಕೂ ಅನುಕೂಲವಾಗಿದೆ. ರೈತರ ಜೊತೆಗೆ ನೇರವಾಗಿ ಒಪ್ಪಂದ ಮಾಡಿಕೊಳ್ಳುವ ಮೂಲಕ 54 ಎಕರೆ ವರೆಗೆ ಭೂಮಿ ಖರೀದಿ ಮಾಡುವುದಕ್ಕೂ ಅವಕಾಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ಹೊರತಾದಂತೆ ಮೈಸೂರು ಸೇರಿದಂತೆ ಇತರ ನಗರಗಳಲ್ಲಿಯೂ ಉದ್ಯಮಗಳ ಆರಂಭಕ್ಕೆ ಅವಕಾಶ ನೀಡಲಾಗಿದ್ದು, ಇದು ಸ್ಥಳೀಯ ಜನರಿಗೆ ಉದ್ಯೋಗ ಸೃಷ್ಟಿ ಮಾಡಿಕೊಡುವುದಕ್ಕೂ ಸಹಕಾರಿಯಾಗಲಿದೆ. ರಾಜ್ಯದ ಉದ್ದಿಮೆಗಳ ಸಿ ಮತ್ತು ಡಿ ಶ್ರೇಣಿಯ ಹುದ್ದೆಗಳಲ್ಲಿ 70% ಗಳಷ್ಟು ಅವಕಾಶವನ್ನು ಕನ್ನಡಿಗರಿಗೆ ನೀಡಬೇಕು ಎನ್ನುವ ನೀತಿಯನ್ನೂ ತರಲಾಗಿದ್ದು, ಇದು ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಶೆಟ್ಟರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.