ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ಪಿಂಚಣಿ ಪಡೆಯುತ್ತಿರುವವರ ಪೈಕಿ 20% ಗಳಷ್ಟು ನಕಲಿ ಫಲಾನುಭವಿಗಳಿದ್ದು, ಅವರನ್ನು ಶೀಘ್ರವೇ ಪತ್ತೆ ಹಚ್ಚಿ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುಮಾರು 67 ಲಕ್ಷ ಮಂದಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ವಾರ್ಷಿಕವಾಗಿ 7500 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ವೆಚ್ಚ ಮಾಡುತ್ತಿದೆ. ಇವರಲ್ಲಿ 20% ಗಳಷ್ಟು ಮಂದಿ ನಕಲಿ ಪಿಂಚಣಿದಾರರಿರುವ ಬಗ್ಗೆ ಅನುಮಾನಗಳಿವೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆ ಮೂಲಕ ಸರ್ಕಾರದ ಬೊಕ್ಕಸಕ್ಕಾಗುತ್ತಿರುವ ನಷ್ಟವನ್ನು ತಪ್ಪಿಸಬೇಕು ಎಂದು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಮೃತಪಟ್ಟವರ ಹೆಸರಿನಲ್ಲಿಯೂ ಪಿಂಚಣಿ ಬಟವಾಡೆಯಾಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ ಹಣ ದುರ್ಬಳಕೆಯಾಗದಂತೆ ಬಿಗಿ ಕ್ರಮ ಕೈಗೊಳ್ಳು ತಿಳಿಸಿದ್ದಾರೆ. ಒಂದು ತಿಂಗಳೊಳಗಾಗಿ ಇವೆಲ್ಲವನ್ನೂ ಪರಿಶೀಲಿಸಿ ಸರಿಪಡಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಇದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.