ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ತಾಂತ್ರಿಕ ಸಮಿತಿಯಲ್ಲಿ ರಾಜ್ಯದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ತಳಕು ಗ್ರಾಮದ ಟಿ ಜಿ ಸೀತಾರಾಮ್ ಅವರು ಸದಸ್ಯರಾಗಿದ್ದಾರೆ. ಎಂಟು ಜನರನ್ನೊಳಗೊಂಡ ಸಮಿತಿ ಇದಾಗಿದ್ದು, ಇದರಲ್ಲಿ ಕರ್ನಾಟಕದ ಸೀತಾರಾಮ್ ಅವರಿಗೂ ಸ್ಥಾನ ದೊರಕಿರುವುದು ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದೆ.
ಇವರು ಕೇಂದ್ರ ಸರ್ಕಾರದ ಹಲವು ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅವುಗಳನ್ನು ಯಶಸ್ವಿಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಇವರ ಕಾರ್ಯ ದಕ್ಷತೆಯನ್ನು ಗಮನಿಸಿ ಇವರನ್ನು ಈ ಸಮಿತಿಗೆ ಆಯ್ಕೆ ಮಾಡಲಾಗಿದೆ. ಸೀತಾರಾಮ್ ಅವರು ಅಸ್ಸಾಂನ ಗುವಾಹಟಿಯ ಐಐಟಿಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರು ಪ್ರೌಢ ಶಿಕ್ಷಣವನ್ನು ದಾವಣಗೆರೆಯ ಮಲೆಬೆನ್ನೂರು, ಎಂಜಿನಿಯರಿಂಗ್ ಪದವಿಯನ್ನು ಯುಬಿಡಿಟಿ ಕಾಲೇಜಿನಲ್ಲಿ, ಬೆಂಗಳೂರಿನ ಐಐಎಸ್ಸಿಯ ಟಾಟಾ ಇನ್ಸ್ಟಿಟ್ಯೂಟ್ನಲ್ಲಿ ಎಂಎಸ್ ಪದವಿಯನ್ನು ಪಡೆದಿದ್ದಾರೆ. ಕೆನಡಾದಲ್ಲಿ ಪಿಎಚ್ಡಿ ಪಡೆದು, ಅಮೆರಿಕದ ಟೆಕ್ಸಾಸ್ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಭಾರತಕ್ಕೆ ಮರಳಿ ಬೆಂಗಳೂರಿನ ಐಐಎಸ್ಸಿ ಯಲ್ಲಿ 20 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಅಸ್ಸಾಂನ ಗುವಾಹಟಿಯಲ್ಲಿನ ಐಐಟಿ ಯಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.