ನವದೆಹಲಿ: ʼಆತ್ಮನಿರ್ಭರ ಭಾರತʼ ಅಭಿಯಾನದ ಮೂಲಕ ಹೊಸ ಭಾರತಕ್ಕಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಯುವಕರಿಗೆ ಮನವಿ ಮಾಡಿದರು.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಸ್ಸಾಂನ ತೇಜ್ಪುರ ವಿಶ್ವವಿದ್ಯಾಲಯದ 18 ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮ ರಾಷ್ಟ್ರವು ಸ್ವಾತಂತ್ರ್ಯದ 75 ನೇ ವರ್ಷವನ್ನು ಪ್ರವೇಶಿಸುತ್ತಿದೆ. ಅಸ್ಸಾಂನ ಅಸಂಖ್ಯಾತ ಜನರು ಸ್ವಾತಂತ್ರ್ಯಕ್ಕಾಗಿ ಕೊಡುಗೆ ನೀಡಿದ್ದಾರೆ. ಹಲವಾರು ಜನರು ತಮ್ಮ ಜೀವನವನ್ನು, ತಮ್ಮ ಯೌವನವನ್ನು ತ್ಯಾಗ ಮಾಡಿದ್ದಾರೆ. ಈಗ ನೀವು ಹೊಸ ಭಾರತ ಮತ್ತು ಆತ್ಮನಿರ್ಭರ ಭಾರತಕ್ಕಾಗಿ ಬದುಕಬೇಕಾಗಿದೆ” ಎಂದು ಕರೆ ನೀಡಿದರು.
“ಕೋವಿಡ್-19 ರ ಸಮಯದಲ್ಲಿ, ಆತ್ಮನಿರ್ಭರ ಭಾರತ ಅಭಿಯಾನವು ನಮ್ಮ ಶಬ್ದಕೋಶದ ಒಂದು ಭಾಗವಾಗಿ ಮಾರ್ಪಟ್ಟಿದೆ. ಇಂದು ಈಶಾನ್ಯದ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ತೊಡಗಿಸಿಕೊಂಡಿರುವ ರೀತಿ, ಸಂಪರ್ಕ, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ನಾವು ಕೆಲಸ ಮಾಡುತ್ತಿರುವ ವಿಧಾನ ಹೊಸತಾಗಿದೆ. ನಿಮಗಾಗಿ ಅವಕಾಶಗಳು ಹೆಚ್ಚಿವೆ. ಈ ಸಾಧ್ಯತೆಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ “ಎಂದು ಅವರು ಹೇಳಿದರು.
ತೇಜ್ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ತಳಮಟ್ಟದ ಆವಿಷ್ಕಾರಗಳು ‘ಸ್ಥಳೀಯತೆಗೆ ಧ್ವನಿ’ ಧ್ಯೇಯಕ್ಕೆ ಪ್ರಚೋದನೆಯನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು. ಈ ಆವಿಷ್ಕಾರಗಳು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತವೆ ಮತ್ತು ಇದರಿಂದಾಗಿ ಅಭಿವೃದ್ಧಿಯ ಹೊಸ ಬಾಗಿಲು ತೆರೆಯುತ್ತದೆ ಎಂದು ಅವರು ಹೇಳಿದರು.
“ತ್ಯಾಜ್ಯವನ್ನು ಶಕ್ತಿಯನ್ನಾಗಿ ಪರಿವರ್ತಿಸುವುದರ ಪರಿಣಾಮವೂ ದೊಡ್ಡದಾಗಿದೆ. ನಮ್ಮ ರೈತರಿಗೆ ಮತ್ತು ಪರಿಸರಕ್ಕೆ ಬೆಳೆಗಳ ತ್ಯಾಜ್ಯ ದೊಡ್ಡ ಸವಾಲಾಗಿವೆ. ಜೈವಿಕ ಅನಿಲ ಮತ್ತು ಸಾವಯವ ಗೊಬ್ಬರಗಳಿಗೆ ಸಂಬಂಧಿಸಿದ ತಂತ್ರಜ್ಞಾನದ ಮೇಲೆ ನೀವು ಮಾಡುತ್ತಿರುವ ಕಾರ್ಯವು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯನ್ನು ಪರಿಹರಿಸುತ್ತದೆ ” ಎಂದು ಅವರು ಹೇಳಿದರು.
ತೇಜ್ಪುರ ವಿಶ್ವವಿದ್ಯಾಲಯವನ್ನು ಶ್ಲಾಘಿಸಿದ ಅವರು, ಈಶಾನ್ಯದ ಜೀವವೈವಿಧ್ಯತೆ ಮತ್ತು ಶ್ರೀಮಂತ ಪರಂಪರೆಯನ್ನು ಸಂರಕ್ಷಿಸುವ ಅಭಿಯಾನವನ್ನು ವಿಶ್ವವಿದ್ಯಾಲಯ ನಡೆಸುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.