ಬೆಂಗಳೂರು: ಸರ್ಕಾರಿ ನೌಕರಿಯಲ್ಲಿರುವವರು ಅಕಾಲಿಕ ಮರಣಕ್ಕೆ ತುತ್ತಾದಂತಹ ಸಂದರ್ಭದಲ್ಲಿ, ಅನುಕಂಪದ ಆಧಾರದಲ್ಲಿ ಅವರ ಹೆಣ್ಣು ಮಕ್ಕಳಿಗೂ ಹುದ್ದೆಗಳನ್ನು ನೀಡುವ ಮಹತ್ವದ ನಿರ್ಧಾರವೊಂದನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಸರ್ಕಾರಿ ನೌಕರರ ಅನುಕಂಪ ಆಧಾರಿತ ನೇಮಕಾತಿ ಸೇವಾ ನಿಯಮಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಸರ್ಕಾರಿ ನೌಕರಿಯಲ್ಲಿದ್ದವರು ಅಕಾಲಿಕವಾಗಿ ಮೃತಪಟ್ಟ ಸಂದರ್ಭದಲ್ಲಿ, ಅನುಕಂಪದ ಆಧಾರದಲ್ಲಿ ಹುದ್ದೆಯನ್ನು ಕೇವಲ ಗಂಡು ಮಕ್ಕಳಿಗೆ ಮಾತ್ರವಲ್ಲ. ಬದಲಾಗಿ ಹೆಣ್ಣು ಮಕ್ಕಳಿಗೂ ಕೆಲಸ ನೀಡುವುದಕ್ಕೆ ಪೂರಕವಾಗುವಂತೆ ಈ ಕಾಯ್ದೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಮೃತಪಟ್ಟ ವ್ಯಕ್ತಿಗೆ ಸ್ವಂತ ಮಕ್ಕಳಿಲ್ಲದೆ ಸಾಕು ಮಕ್ಕಳನ್ನು ಹೊಂದಿದ್ದರೆ ಅವರಿಗೂ ಅನುಕಂಪದ ಆಧಾರದಲ್ಲಿ ನೌಕರಿ ನೀಡಲಾಗುತ್ತದೆ ಎಂಬ ವ್ಯಾಖ್ಯೆಯನ್ನು ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) (ತಿದ್ದುಪಡಿ) ನಿಯಮಗಳು 2020 ಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.