ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಕಣಿವೆಯ ಮೂರು ಜಿಲ್ಲೆಗಳಲ್ಲಿ ಎರಡು ಈಗ ಭಯೋತ್ಪಾದನೆಯಿಂದ ಮುಕ್ತವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
“ಚೆನಾಬ್ ಕಣಿವೆಯಲ್ಲಿ ಮೂರು ಜಿಲ್ಲೆಗಳಿವೆ. ಇವುಗಳಲ್ಲಿ, ದೋಡಾ ಮತ್ತು ರಾಂಬನ್ ಈಗ ಉಗ್ರಗಾಮಿತ್ವದಿಂದ ಮುಕ್ತವಾಗಿದ್ದರೆ, ಕಿಶ್ತ್ವಾರ್ ಜಿಲ್ಲೆಯ ಪ್ರದೇಶದಲ್ಲಿ ಇನ್ನೂ ಉಗ್ರಗಾಮಿಗಳ ಉಪಸ್ಥಿತಿಯನ್ನು ಹೊಂದಿದೆ. ಸಾಧ್ಯವಾದಷ್ಟು ಬೇಗ ಅದನ್ನು ಕೂಡ ನಾವು ಉಗ್ರಗಾಮಿ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ”ಎಂದು ದೋಡಾ / ಕಿಶ್ತ್ವಾರ್ / ರಾಂಬನ್ (ಡಿಕೆಆರ್) ಶ್ರೇಣಿಯ ಉಪ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಡಿಐಜಿ) ಅಬ್ದುಲ್ ಜಬ್ಬರ್ ಗುರುವಾರ ಹೇಳಿದ್ದಾರೆ.
ಗಣರಾಜ್ಯೋತ್ಸವದ ಮುನ್ನ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ದೋಡಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಡಿಐಜಿ, ಪ್ರಸ್ತುತ ಸಮಯದಲ್ಲಿ ಚೆನಾಬ್ ಕಣಿವೆಯಲ್ಲಿ ಅತ್ಯಂತ ಶಾಂತಿಯುತ ಪರಿಸ್ಥಿತಿ ಇದೆ ಎಂದು ಹೇಳಿದರು.
“ವಲಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಉಗ್ರಗಾಮಿತ್ವದ ಸ್ಥಿತಿಯನ್ನು ಪರೀಕ್ಷಿಸಲು ನಾನು ಅಪರಾಧ ವಿಮರ್ಶೆ ಸಭೆ ನಡೆಸಿದ್ದೇನೆ” ಎಂದು ಅವರು ಹೇಳಿದರು, ವಲಯದಲ್ಲಿನ ಭದ್ರತಾ ಪರಿಸ್ಥಿತಿ ತೃಪ್ತಿಕರವಾಗಿದೆ ಎಂದು ಅವರು ಹೇಳಿದರು.
ಕೋವಿಡ್-19 ರ ಹಿನ್ನೆಲೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಆಚರಣೆಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು. ಆರೋಗ್ಯ ಇಲಾಖೆ ನೀಡಿದ ಮಾರ್ಗಸೂಚಿಗಳನ್ನು ಅನುಸರಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು ಎಂದು ಅವರು ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.