ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಅಹಿತಕರ, ಜನರಲ್ಲಿ ಭಯವನ್ನು ಹುಟ್ಟಿಸುವಂತಹ ಸಮಾಜಘಾತುಕ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಡಿಪಿಐ, ಪಿಎಫ್ಐ ನಂತಹ ದೇಶ ವಿರೋಧಿ ಕೃತ್ಯಗಳನ್ನು ನಡೆಸುವ ಸಂಘಟನೆಗಳನ್ನು ತತಕ್ಷಣವೇ ನಿಷೇಧ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಗ್ರಹಿಸಿದೆ.
ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಧರ್ಮ ವಿರೋಧಿ ಕೃತ್ಯಗಳನ್ನು ನಡೆಸಲಾಗುತ್ತಿದೆ. ಮಹಿಳೆಯರು ಮತ್ತು ಹಿಂದೂ ಸಮಾಜವನ್ನು ಗುರಿಯಾಗಿಸಿಕೊಂಡು ಸಮಾಜ ಘಾತುಕ ಕೃತ್ಯಗಳನ್ನು ಎಸ್ಡಿಪಿಐ, ಪಿಎಫ್ಐ ನಂತಹ ಸಂಘಟನೆಗಳು ನಡೆಸಿಕೊಂಡು ಬರುತ್ತಿವೆ. ಆ ಮೂಲಕ ಭಯದ ವಾತಾವರಣವನ್ನು ನಿರ್ಮಾಣ ಮಾಡುತ್ತಿವೆ. ಉಗ್ರರ ಪರ ಗೋಡೆ ಬರಹಗಳನ್ನು ಬರೆಯುವುದು, ಕರ್ತವ್ಯ ನಿರತ ಪೊಲೀಸರಮೇಲೆ ಹಲ್ಲೆ ನಡೆಸುವುದು, ಮಹಿಳೆಯರ ಮೇಲೆ ದೌರ್ಜನ್ಯ ಮೊದಲಾದವುಗಳು ಹೆಚ್ಚಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ದುರ್ಗಾವಾಹಿನಿ ವತಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ತಿಳಿಸಿದ್ದಾರೆ.
ಎಸ್ಡಿಪಿಐ, ಪಿಎಫ್ಐ ಸಂಘಟನೆಗಳು ದೇಶ ವಿರೋಧಿ ಘೋಷಣೆಗಳನ್ನು, ಪಾಕಿಸ್ಥಾನದ ಪರ ಘೋಷಣೆಗಳನ್ನು ಹಾಕುತ್ತವೆ. ಅನಗತ್ಯ ವಿಚಾರಗಳನ್ನಿಟ್ಟುಕೊಂಡು ಹಿಂದೂ ಧರ್ಮದ ಪ್ರತಿಷ್ಟಿತರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಿದ್ದಾರೆ. ಇಂತಹ ಕೃತ್ಯಗಳನ್ನು ನಡೆಸುವವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಎಲ್ಲಾ ಹಿನ್ನೆಲೆಯಲ್ಲಿ ಜ. 25 ರಂದು ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಬಜರಂಗದಳದ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ. ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ, ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಕುಕೃತ್ಯ ನಡೆಸುವವರ ವಿರುದ್ಧ, ಅಂತಹ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಜರಂಗದಳ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.