ಬೆಂಗಳೂರು: ರಾಜ್ಯದಲ್ಲಿ ಶಿವಶರಣರ ಜನ್ಮಸ್ಥಳಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಮೈಸೂರಿನ ಜೆಪಿ ನಗರ ಶಿವಶರಣ ವೆದಿಕೆಯಿಂದ ನಿರ್ಮಾಣ ಮಾಡಲಾಗಿರುವ 11 ಅಡಿ ಎತ್ತರದ ಅಕ್ಕಮಹಾದೇವಿ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ವಚನಕಾರ್ತಿ ಶಿವಶರಣರಲ್ಲಿ ಓರ್ವಳಾದ ಅಕ್ಕಮಹಾದೇವಿ ಶಿವಮೊಗ್ಗದ ಶಿಕಾರಿಪುರದಲ್ಲಿ ಜನ್ಮ ಪಡೆದವಳು. ಅಕ್ಕಮಹಾದೇವಿ ಮಾತ್ರವಲ್ಲದೆ ಇನ್ನೂ ಅನೇಕ ಮಂದಿ ಮಹಾ ಪುರುಷರು ಶಿವಮೊಗ್ಗದಲ್ಲಿ ಜನ್ಮ ಪಡೆದಿದ್ದಾರೆ. ಅಕ್ಕಮಹಾದೇವಿ ಜನಿಸಿದ ಉಡುತಡಿಯ ಸ್ಥಳವನ್ನು ಪ್ರವಾಸಿ ಸ್ಥಳವನ್ನಾಗಿಸಲು, ಭಕ್ತಿ ಶ್ರದ್ಧೆಯ ಕೇಂದ್ರವಾಗಿ ಮಾರ್ಪಡಿಸಲು ಪೂರಕ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಖ್ಯಾತ ವಚನಕಾರ ಬಸವಣ್ಣ ಜನಿಸಿದ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕಾಗಿ 500 ಕೋಟಿ ರೂ. ಗಳ ಕಟ್ಟಡ ಕಾಮಗಾರಿಗೂ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಇನ್ನೂ ಅನೇಕ ಸ್ಥಳಗಳಲ್ಲಿ ಶಿವಶರಣರು ಜನಿಸಿದ್ದು, ಶರಣರ ಜನ್ಮಸ್ಥಳಗಳನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.