ಬೆಂಗಳೂರು: 2021 ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಈ ಪುರಸ್ಕಾರಕ್ಕೆ ದೇಶದ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದು, ಅವರಲ್ಲಿ ಇಬ್ಬರು ಕರ್ನಾಟಕದವರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬನ್ನೂರು ನಿವಾಸಿ ರಾಕೇಶ್ ಕೃಷ್ಣ, ಬೆಂಗಳೂರಿನ ವೀರ್ ಕಶ್ಯಪ್ ಈ ಪುರಸ್ಕಾರಕ್ಕೆ ಭಾಜನರಾಗುವ ಮೂಲಕ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ಈ ಪುರಸ್ಕಾರಕ್ಕೆ ಆಯ್ಕೆಯಾದ 32 ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ವಿಭಾಗದಲ್ಲಿ 9 ವಿದ್ಯಾರ್ಥಿಗಳಿಗೆ, ಕಲೆ- ಸಂಸ್ಕೃತಿ ವಿಭಾಗದಲ್ಲಿ 7 ವಿದ್ಯಾರ್ಥಿಗಳನ್ನು, ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ 5 ವಿದ್ಯಾರ್ಥಿಗಳನ್ನು, ಶೌರ್ಯ ವಿಭಾಗದಲ್ಲಿ 3 ಮಂದಿ ವಿದ್ಯಾರ್ಥಿಗಳನ್ನು ಮತ್ತು ಸಾಮಾಜಿಕ ಸೇವಾ ವಿಭಾಗಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿಯನ್ನು ಈ ಪ್ರತಿಷ್ಟಿತ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪುರಸ್ಕಾರಕ್ಕೆ ಭಾಜನರಾದ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.