ನವದೆಹಲಿ: ಇಂದು ದೇಶ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಧ್ವಜಾರೋಹಣ ನೆರವೇರಿದ ಬಳಿಕ ಚಿತ್ತಾಕರ್ಷಕ ಮೆರವಣಿಗೆ ನಡೆಯಲಿದೆ.
ಟ್ವಿಟ್ ಮಾಡಿರುವ ಮೋದಿ, “ದೇಶವಾಸಿಗಳಿಗೆ ಗಣತಂತ್ರ ದಿನದ ಶುಭಾಶಯಗಳು. ಜೈ ಹಿಂದ್” ಎಂದಿದ್ದಾರೆ.
ರಾಷ್ಟ್ರ ರಾಜಧಾನಿ ಇಂದು ಎರಡು ದೊಡ್ಡ ಘಟನೆಗಳಿಗೆ ಸಾಕ್ಷಿಯಾಗಲಿದೆ. ಒಂದು ಗಣರಾಜ್ಯೋತ್ಸವ ಮತ್ತು ಮತ್ತೊಂದು ರೈತರ ಟ್ರಾಕ್ಟರ್ ಮೆರವಣಿಗೆ. ಈ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯಲ್ಲಿ ಸಾವಿರಾರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಹಲವಾರು ಗಡಿ ಪಾಯಿಂಟ್ಗಳೊಂದಿಗೆ ನಗರವನ್ನು ಭಾರೀ ಭದ್ರತಾ ವ್ಯಾಪ್ತಿಗೆ ತರಲಾಗಿದೆ.
ಶಾಂತಿ ಕಾಪಾಡಲು ಸುಮಾರು 6,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಂಕಿತರ ಮುಖ ಗುರುತಿಸುವಿಕೆಯ ವ್ಯವಸ್ಥೆಯನ್ನು ವಾಂಟೇಜ್ ಪಾಯಿಂಟ್ಗಳಲ್ಲಿ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಈ ಬಾರಿ ಕೋವಿಡ್ ಕೋವಿಡ್ ಹಿನ್ನೆಲೆಯಲ್ಲಿ ಕಡಿಮೆ ಜನರು ಭಾಗಿಯಾಗಲಿದ್ದಾರೆ.
देशवासियों को गणतंत्र दिवस की ढेरों शुभकामनाएं। जय हिंद!
Wishing all the people of India a Happy #RepublicDay. Jai Hind!
— Narendra Modi (@narendramodi) January 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.