ನವದೆಹಲಿ: ರೈತರ ಟ್ರಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ, ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ದೆಹಲಿಯಲ್ಲಿ ಹೆಚ್ಚುವರಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ.
ಮಂಗಳವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಇತರರು ಭಾಗವಹಿಸಿದ್ದರು.
ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಶಾ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲು ಹೆಚ್ಚುವರಿ ಅರೆಸೈನಿಕ ಪಡೆಗಳನ್ನು ಕರೆತರಲಾಗುವುದು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚುವರಿವಾಗಿ ನಿಯೊಜನೆಗೊಳ್ಳಲಿರುವ ಸೈನಿಕರ ನಿಖರ ಸಂಖ್ಯೆ ತಕ್ಷಣವೇ ತಿಳಿದಿಲ್ಲ, ಆದರೆ ಸುಮಾರು 1,500 ರಿಂದ 2,000 ಸಿಬ್ಬಂದಿ (ಸುಮಾರು 15 ರಿಂದ 20 ಕಂಪನಿಗಳು) ಇರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಮುನ್ನ ಸುಮಾರು 4,500 ಅರೆಸೈನಿಕ ಸಿಬ್ಬಂದಿಯನ್ನು ಕಾನೂನು ಸುವ್ಯವಸ್ಥೆಗಾಗಿ ಈಗಾಗಲೇ ನಿಯೋಜಿಸಲಾಗಿತ್ತು.
Delhi: Heavy security deployment near Red Fort in the national capital.
'83 Police personnel were injured after being attacked by agitating farmers yesterday,' as per Delhi Police. pic.twitter.com/AvK7DVtsEY
— ANI (@ANI) January 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.