ಬೆಂಗಳೂರು: ನವದೆಹಲಿಯಲ್ಲಿ ರೈತರ ಹೆಸರಿನಲ್ಲಿ ಪುಂಡಾಟ ನಡೆಯುತ್ತಿದೆ. ಇಂತಹ ಹೊಲಸು ರಾಜಕೀಯ ದೇಶಭಕ್ತಿಯಾಗುವುದಿಲ್ಲ. ಇದು ದೇಶ ಭಕ್ತರು ಮಾಡುವ ಕೆಲಸವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರೈತರ ಹೆಸರನ್ನು ಬಳಸಿ ರಾಷ್ಟ್ರದ ಘನತೆಗೆ ಚ್ಯುತಿ ತರುವ ಕೆಲಸವಾಗಿದೆ. ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವ ಕೆಲಸವನ್ನು ರಾಷ್ಟ್ರಘಾತುಕ ಶಕ್ತಿಗಳು ಮಾಡಿವೆ. ಇದಕ್ಕೆ ಕೆಲವು ರಾಜಕೀಯ ಪಕ್ಷಗಳೂ ಬೆಂಬಲ ನೀಡಿರುವುದು ದುರಂತ. ಈ ಪ್ರತಿಭಟನೆಯನ್ನು ರೈತರ ದಿಕ್ಕು ತಪ್ಪಿಸುವ ಮೂಲಕ ನಡೆಸಲಾಗುತ್ತಿದ್ದು, ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ ಎಂದು ಕಟೀಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಕೈಯಲ್ಲಿ ಅಧಿಕಾರ ಇಲ್ಲದೇ ಇರುವ ಸಂದರ್ಭದಲ್ಲಿ ಇಂತಹ ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿರುತ್ತದೆ. ಸಮಾಜದ ಶಾಂತಿ ಕದಡುವ, ಹಿಂಸೆಗೆ ಪ್ರಚೋದನೆ ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ. ಸಿಎಎ ಸಂದರ್ಭದಲ್ಲಿಯೂ ಇಂತಹದ್ದೇ ಪ್ರತಿಭಟನೆ ನವದೆಹಲಿಯಲ್ಲಿ ನಡೆದಿತ್ತು. ಆಗ ಪಿಸ್ತೂಲ್ ಹಿಡಿಯಲಾಗಿತ್ತು. ಈ ರೈತ ಪ್ರತಿಭಟನೆಯಲ್ಲಿ ತಲವಾರ್ ಹಿಡಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಮುಖ್ಯ. ಅದಕ್ಕಾಗಿ ಅದು ದೇಶದ ಹಿತವನ್ನೂ ಬಲಿ ಕೊಡುವುದಕ್ಕೆ ಸಿದ್ಧವಿದೆ. ಅದಕ್ಕಾಗಿಯೇ ಈ ಪ್ರತಿಭಟನೆಗೂ ಬೆಂಬಲ ನೀಡುವ ಕೆಲಸವನ್ನು ಮಾಡುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.