ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 2,412 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ದೇಶದ 18 ರಾಜ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 12,351 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕಕ್ಕೆ 2,412 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದೆ. ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಿದೆ.
ಈ ಮೊತ್ತ 2020-21ನೆ ಹಣಕಾಸು ವರ್ಷದಲ್ಲಿ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿರುವ ಮೂಲ ಅನುದಾನದ ಎರಡನೇ ಕಂತು ಇದಾಗಿದೆ. ಪಂಚಾಯತ್ ರಾಜ್ ಶಿಫಾರಸ್ಸಿನ ಮೇಲೆ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮುದಾಯ ಸ್ವತ್ತುಗಳನ್ನು ನಿರ್ಮಿಸಲು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಸುಧಾರಿಸಲು 15 ನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ. ಹಳ್ಳಿಗಳು ಮತ್ತು ತಾಲೂಕುಗಳಾದ್ಯಂತ ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುವು ಮಾಡಿಕೊಡಲು ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲಾ ಮೂರು ಹಂತಗಳಿಗೆ (ಗ್ರಾಮ, ತಾಲ್ಲೂಕು ಮತ್ತು ಜಿಲ್ಲೆ) ಅನುದಾನವನ್ನು ನೀಡಲಾಗುತ್ತದೆ.
15 ನೇ ಹಣಕಾಸು ಆಯೋಗವು ಆರ್ಎಲ್ಬಿಗಳಿಗೆ ಮೂಲ ಮತ್ತು ಷರತ್ತಿನ ಅನುದಾನ ಎಂದು ಎರಡು ರೀತಿಯ ಅನುದಾನವನ್ನು ಶಿಫಾರಸು ಮಾಡಿದೆ. ಮೂಲ ಅನುದಾನವನ್ನು ಸ್ಥಳೀಯ ಸಂಸ್ಥೆಗಳು ಸಂಬಳ ಅಥವಾ ಇತರ ವೆಚ್ಚಗಳನ್ನು ಹೊರತುಪಡಿಸಿ ಸ್ಥಳ ನಿರ್ದಿಷ್ಟವಾದ ಕೆಲಸಗಳಿಗೆ ಬಳಸಬಹುದು. ಷರತ್ತಿನ ಅನುದಾನವನ್ನು (ಎ) ಬಯಲು ಮಲವಿಸರ್ಜನೆ ಮುಕ್ತ (ಒಡಿಎಫ್) ಸ್ಥಿತಿಯ ನೈರ್ಮಲ್ಯ ಮತ್ತು ನಿರ್ವಹಣೆ ಮತ್ತು (ಬಿ) ಕುಡಿಯುವ ನೀರು ಸರಬರಾಜು, ಮಳೆ ನೀರು ಕೊಯ್ಲು ಮತ್ತು ನೀರಿನ ಮರುಬಳಕೆಗಾಗಿ ಬಳಸಬಹುದು. ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಾದ ಸ್ವಚ್ಛ ಭಾರತ, ಜಲಜೀವನ್ ಮಿಷನ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯವು ನೈರ್ಮಲ್ಯ ಮತ್ತು ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ಹಣಕ್ಕೆ ಹೆಚ್ಚುವರಿಯಾಗಿ ಈ ಅನುದಾನ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.