ನವದೆಹಲಿ: ಇಟಲಿಯ ರೋಮ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಜನವರಿ 26 ರಂದು ಖಲಿಸ್ಥಾನಿ ಪರ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ರಾತ್ರಿಯ ವೇಳೆ ಖಲಿಸ್ಥಾನದ ಧ್ವಜಗಳನ್ನು ಹಾರಿಸಲಾಗಿದೆ, ಖಲಿಸ್ತಾನವನ್ನು ಶ್ಲಾಘಿಸುವ ಘೋಷಣೆ ಗೋಡೆಗಳ ಮೇಲೆ ಬರೆಯಲಾಗಿದೆ. ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ವರದಿಯಾಗಿದೆ.
ಘಟನೆಯ ನಂತರ, ಭಾರತವು ಇಟಲಿ ಸರ್ಕಾರದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಹೇಳಿದೆ.
“ನಾವು ಈ ನಿರ್ದಿಷ್ಟ ಘಟನೆಯ ಬಗ್ಗೆ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ನಮ್ಮ ಕಳವಳಗಳನ್ನು ತಿಳಿಸಿದ್ದೇವೆ. ಭಾರತೀಯ ರಾಜತಾಂತ್ರಿಕರು ಮತ್ತು ರಾಜತಾಂತ್ರಿಕ ಆವರಣಗಳ ಸುರಕ್ಷತೆ ಆತಿಥೇಯ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಭಾರತ ಹೇಳಿರುವುದಾಗಿ ಮೂಲಗಳು ಉಲ್ಲೇಖಿಸಿವೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಇಟಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಭಾರತ ಭರವಸೆ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಮಂಗಳವಾರ, ಖಲಿಸ್ತಾನ್ ಪರವಾದ ಪ್ರತ್ಯೇಕತಾವಾದಿ ಗುಂಪುಗಳ ಸದಸ್ಯರು ವಾಷಿಂಗ್ಟನ್ ಡಿಸಿಯ ಭಾರತೀಯ ರಾಯಭಾರ ಕಚೇರಿಯ ಹೊರಗೆ ಜಮಾಯಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿದ್ದಾರೆ.
ಇಲ್ಲಿ ನೆರೆದ ಜನರು ಕೂಡ ‘ಖಲಿಸ್ಥಾನ್’ ಧ್ವಜಗಳನ್ನು ಹಿಡಿದು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಹೊಸದಾಗಿ ಅಂಗೀಕರಿಸಿದ ಕೃಷಿ ಮಸೂದೆಗಳು ಭಾರತದ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.