ನವದೆಹಲಿ: ಪದೇಪದೇ ನಕಲಿ ಸುದ್ದಿಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಅವರ ವಿರುದ್ಧ ಕೊನೆಗೂ ಇಂಡಿಯಾ ಟುಡೇ ಕ್ರಮ ಕೈಗೊಂಡಿದೆ. ಸೋಶಿಯಲ್ ಮೀಡಿಯಾ ಗೈಡ್ ಲೈನ್ಗಳನ್ನು ಪದೇಪದೇ ಉಲ್ಲಂಘಿಸಿದ್ದಕ್ಕಾಗಿ ಸರ್ದೇಸಾಯಿ ಅವರಿಗೆ ಎರಡು ವಾರಗಳ ಅಮಾನತು ಶಿಕ್ಷೆ ವಿಧಿಸಿದೆ. ಅಲ್ಲದೇ ಒಂದು ತಿಂಗಳ ವೇತನವನ್ನು ಕಡಿತ ಮಾಡಿದೆ.
ಜನವರಿ 26ರಂದು ಗಣರಾಜ್ಯೋತ್ಸವದ ದಿನ ರೈತರು ನಡೆಸಿದ ಟ್ರ್ಯಾಕ್ಟರ್ ಪೆರೇಡ್ ಸಂದರ್ಭ ಭಾರೀ ಹಿಂಸಾಚಾರ ಭುಗಿಲೆದ್ದಿತ್ತು. ಇವೆಲ್ಲ ಕೆಲವು ಪ್ರತಿಭಟನಾಕಾರರು ಟ್ರ್ಯಾಕ್ಟರ್ ಹಿಡಿದುಕೊಂಡು ಪೊಲೀಸರನ್ನು ಭಯಭೀತಗೊಳಿಸುವ ಮಟ್ಟಕ್ಕೆ ಇಳಿದಿದ್ದರು. ಈ ಸಂದರ್ಭದಲ್ಲಿ ಓರ್ವ ಪ್ರತಿಭಟನಾಕಾರ ಟ್ರ್ಯಾಕ್ಟರ್ ಮೂಲಕ ಸ್ಟಂಟ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿ ಆಗಿ ಮೃತಪಟ್ಟಿದ್ದ.
ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ಸರ್ದೇಸಾಯಿ, “ಪೊಲೀಸ್ ಫೈರಿಂಗ್ನಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಈತನ ಸಾವು ವ್ಯರ್ಥವಾಗುವುದಿಲ್ಲ ಎಂದು ರೈತರು ನನ್ನ ಬಳಿ ಹೇಳಿಕೊಂಡಿದ್ದಾರೆ” ಎಂದಿದ್ದರು.
ಆದರೆ ದೆಹಲಿ ಪೊಲೀಸರು ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸತ್ಯಾಸತ್ಯತೆ ಜನರಿಗೆ ತಿಳಿಯುವಂತೆ ಮಾಡಿದ್ದರು. ಇದರಿಂದಾಗಿ ಸರ್ದೇಸಾಯಿ ಟ್ವೀಟ್ ಸುಳ್ಳು ಎಂಬುದು ಬಹಿರಂಗವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಕೊನೆಗೆ ತನ್ನ ಟ್ವಿಟ್ ಅನ್ನು ಸರ್ದೇಸಾಯಿ ಅಳಿಸಿ ಹಾಕಬೇಕಾಯಿತು.
ಈ ಘಟನೆಯಿಂದ ಇಂಡಿಯಾ ಟುಡೇ ಮುಜುಗರಕ್ಕೆ ಒಳಗಾಗಬೇಕಾಯಿತು. ಹೀಗಾಗಿ ಅದು ತನ್ನ ತಾರಾ ಪತ್ರಕರ್ತನ ವಿರುದ್ಧ ಕ್ರಮ ಕೈಗೊಂಡಿದೆ. ಎರಡು ವಾರ ಅವರನ್ನು ಮಾಧ್ಯಮದಿಂದ ದೂರ ಇಡುವ ನಿರ್ಧಾರ ಮಾಡಿದೆ. ಅಲ್ಲದೆ ಒಂದು ತಿಂಗಳ ವೇತನವನ್ನು ಕಟ್ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.