ಬೆಂಗಳೂರು: ರಾಜ್ಯದಲ್ಲಿ ಇ-ಕಾಮರ್ಸ್ ರಫ್ತು ಹೆಚ್ಚಿಸುವ ದೂರದೃಷ್ಟಿಯನ್ನಿರಿಸಿಕೊಂಡು ಸರ್ಕಾರವು ಪ್ರಸಿದ್ಧ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ಜೊತೆಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ.
ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಉತ್ಪಾದನೆ ಮತ್ತು ಆವಿಷ್ಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ಸಾಮರ್ಥ್ಯವನ್ನು ವಿಶ್ವಕ್ಕೇ ಪರಿಚಯಿಸುವ ನಿಟ್ಟಿನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನೂತನ ಕೈಗಾರಿಕಾ ನೀತಿ 2020-25 ನ್ನು ರೂಪಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಮತ್ತು ಅದರ ಹೊರತಾದಂತೆ ಉಳಿದ ನಗರಗಳಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆದುಕೊಳ್ಳಲಾಗಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಕರ್ನಾಟಕ ನೆಲೆಯಾಗಿದ್ದು, ಈ ಹಿನ್ನೆಲೆಯಲ್ಲಿ ಈ ಒಪ್ಪಂದ ಮಹತ್ವಪೂರ್ಣವಾಗಲಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮದ್ಯಮ ಉದ್ಯಮ ವಲಯಗಳು ಸಂಕಷ್ಟಕ್ಕೆ ಒಳಗಾಗಿದೆ. ಇದೀಗ ಈ ಕೈಗಾರಿಕೆಗಳನ್ನು ವಿಶ್ವಕ್ಕೆ ಪರಿಚಯಿಸುವ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಆರ್ಥಿಕ ಚೇತರಿಕೆ ಕಾಣುವುದಕ್ಕೆ ನೆರವಾಗುವ ನಿಟ್ಟಿನಲ್ಲಿಯೂ ಅಮೆಜಾನ್ ಜೊತೆಗಿನ ಈ ಒಪ್ಪಂದ ಮಹತ್ವ ಪಡೆಯಲಿದೆ. ತಮ್ಮದೇ ಬ್ರಾಂಡ್ ನಿರ್ಮಿಸಿ ಅಮೆಜಾನ್ ಮೂಲಕ ಜಾಗತಿಕ ಮಾರುಕಟ್ಟೆಗಳಲ್ಲಿ ಸ್ಥಾನ ಪಡೆದುಕೊಳ್ಳುವ ಹಿನ್ನೆಲೆಯಲ್ಲಿಯೂ ಈ ಒಪ್ಪಂದ ಪರಿಣಾಮಕಾರಿಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.