ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಖಾಸಗಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಚರ್ಚೆ ನಡೆಯುತ್ತಿತ್ತು. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಿ, 30% ಶುಲ್ಕ ಕಡಿತದ ಆದೇಶವನ್ನು ಹೊರಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರ ಪತ್ರವೊಂದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮಕ್ಕಳಿಗಾಗಿ ಸಮಸ್ವಯತೆ ಬೇಕಿದೆ ಎಂದು ತಿಳಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರ ನಡುವೆ ಉತ್ತಮ ಬಾಂಧವ್ಯ ಇರದೇ ಹೋದಲ್ಲಿ ಇಂತಹ ಸಮಸ್ಯೆಗಳು ಉದ್ಭವವಾಗುತ್ತದೆ ಎಂದು ತಿಳಿಸಿದ್ದಾರೆ. ಆದರೂ ಈ ಸಮಸ್ಯೆಗಳನ್ನು ಪೋಷಕರು, ಶಿಕ್ಷಕರನ್ನೊಳಗೊಂಡ ಶಾಲಾ ಸಮಿತಿ ಬಗೆಹರಿಸಿಕೊಳ್ಳಲಿ, ಸರ್ಕಾರದ ಮಧ್ಯಪ್ರವೇಶ ಬೇಡ ಎಂದು ಹಲವು ಬಾರಿ ಚಿಂತನೆ ನಡೆಸಿತ್ತು. ಆದರೂ ಕೊನೆಗೂ ಈ ಸಮಸ್ಯೆ ಬಗೆಹರಿಯದೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಗಳಿರುವುದನ್ನು ಮನಗಂಡು ಸರ್ಕಾರವೇ ಪೋಷಕರ ಮತ್ತು ಶಿಕ್ಷಕರ ಹಿತ ಗಮನಿಸಿ ಆದೇಶ ಹೊರಡಿಸಿದ್ದಾಗಿ ತಿಳಿಸಿದ್ದಾರೆ.
ಆದರೆ ಶಾಲಾ ಸಮಿತಿಗಳಲ್ಲಿ ಈ ರೀತಿಯ ವ್ಯವಸ್ಥೆ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ಹಾಗಾಗಿ ನಾವೆಲ್ಲರೂ ಸಮನ್ವಯದ ಹಾದಿ ಹಿಡಿಯೋಣ. ಪರಸ್ಪರ ಭಾವನೆಗಳನ್ನು ಗೌರವಿಸುವತ್ತ ಚಿತ್ತ ಹರಿಸೋಣ ಎಂದು ಪೋಷಕರು ಮತ್ತು ಶಾಲಾ ಆಡಳಿತದಲ್ಲಿ ಮನವಿ ಮಾಡುತ್ತಿರುವುದಾಗಿ ಅವರು ಈ ಕರಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.