ನವದೆಹಲಿ: ಜನವರಿ 26 ರಂದು ನಡೆದ ರೈತರ ಟ್ರ್ಯಾಕ್ಟರ್ ಪೆರೇಡ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಗುರುತಿಸಲ್ಪಟ್ಟ 12 ಗಲಭೆಕೋರರಿಗಾಗಿ ಭಾರಿ ಶೋಧ ನಡೆಸಿದ್ದಾರೆ. ವರದಿಗಳ ಪ್ರಕಾರ, ಜನವರಿ 26 ರಂದು ರೈತರ ಟ್ರ್ಯಾಕ್ಟರ್ ಪೆರೇಡ್ ಹೆಸರಿನಲ್ಲಿ ಹಿಂಸಾಚಾರಕ್ಕೆ ಮುಖ್ಯವಾಗಿ ಕಾರಣರಾದ ಗಲಭೆಕೋರರನ್ನು ಪೊಲೀಸರು ಗುರುತಿಸಲು ಪ್ರಾರಂಭಿಸಿದ್ದಾರೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಅಪರಾಧ ವಿಭಾಗವು ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದ ಗಲಭೆಕೋರರನ್ನು ಗುರುತಿಸಲು ವಿಧಿವಿಜ್ಞಾನ ತಂಡದ ಸಹಾಯ ಪಡೆಯಲು ಪ್ರಾರಂಭಿಸಿದೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧ ಶಾಖೆಯು ಹಲವಾರು ವೀಡಿಯೊಗಳನ್ನು ಪತ್ತೆ ಮಾಡಿದೆ. ದೆಹಲಿ ಪೊಲೀಸರು, ಫೋರೆನ್ಸಿಕ್ ತಂಡದ ಸಹಾಯದಿಂದ ಆ ವೀಡಿಯೊಗಳಲ್ಲಿನ ಗಲಭೆಕೋರರ ಮಸುಕಾದ ಮುಖಗಳನ್ನು ಗುರುತಿಸುತ್ತಿದ್ದಾರೆ.
ಗಲಭೆಯ ಸಂದರ್ಭ 12 ಜನರು ದೊಣ್ಣೆ ಮತ್ತುಕೋಲುಗಳನ್ನು ಹೊತ್ತುಕೊಂಡು ಹೋಗುವುದನ್ನು ಪೊಲೀಸರು ನೋಡಿದ್ದಾರೆ. ಪೊಲೀಸರ ಪ್ರಕಾರ, ಈ ದುಷ್ಕರ್ಮಿಗಳು ಹಿಂಸಾಚಾರದಲ್ಲಿ ತೊಡಗಿದ್ದರು ಮತ್ತು ಕೆಂಪು ಕೋಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.