ನವದೆಹಲಿ: ಪಾಕಿಸ್ಥಾನಕ್ಕೆ ಕದನ ವಿರಾಮ ಉಲ್ಲಂಘನೆ ಮಾಡುವುದು ಛಾಳಿಯಾಗಿ ಮಾರ್ಪಟ್ಟಿದೆ. ಕಳೆದ ಮೂರು ವರ್ಷಗಳಲ್ಲಿ ಗಡಿಯಲ್ಲಿ ಪಾಕಿಸ್ಥಾನ ಒಟ್ಟು 10,752 ಬಾರಿ ಕದನ ವಿರಾಮ ಮಾಡಿದೆ ಎಂದು ಕೇಂದ್ರ ಲೋಕಸಭೆಗೆ ಮಾಹಿತಿಯನ್ನು ನೀಡಿದೆ.
ಪಾಕಿಸ್ಥಾನದ ಈ ಕೃತ್ಯದಿಂದಾಗಿ 72 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. 70 ನಾಗರಿಕರು ಮೃತಪಟ್ಟಿದ್ದಾರೆ.
2018, 2019, 2020ರಲ್ಲಿ ಜಮ್ಮು-ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ಥಾನದ ಕದನ ವಿರಾಮ ನಿಯಮ ಉಲ್ಲಂಘನೆ ಯಲ್ಲಿ 364 ಭದ್ರತಾ ಸಿಬ್ಬಂದಿಗಳು ಮತ್ತು 341 ನಾಗರಿಕರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 1,452 ಪದಕ ದಾಳಿ ನಡೆದಿದೆ. ಈ ದಾಳಿಯಲ್ಲಿ 233 ಭದ್ರತಾ ಸಿಬ್ಬಂದಿಗಳು ಹುತಾತ್ಮ ರಾಗಿದ್ದು, 115 ನಾಗರಿಕರು ಮೃತಪಟ್ಟಿದ್ದಾರೆ ಎಂದು ಲಿಖಿತ ಉತ್ತರ ನೀಡಿದೆ.
ಇದೇ ಅವಧಿಯ ಮೂರು ವರ್ಷಗಳಲ್ಲಿ 635 ಉಗ್ರರನ್ನು ಸೇನೆ ಹತ್ಯೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.