ಪಾಟ್ನಾ: ಹಿಂಸಾಚಾರವನ್ನು ತಡೆಯುವ ಸಲುವಾಗಿ ಬಿಹಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆ ಅಥವಾ ರಸ್ತೆ ತಡೆಗಳಲ್ಲಿ ಭಾಗಿಯಾಗುವ ಜನರಿಗೆ ಸರ್ಕಾರಿ ಕೆಲಸ ಅಥವಾ ಗುತ್ತಿಗೆಯನ್ನು ನಿರಾಕರಿಸಲಾಗುವುದು ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಹಿಂಸಾತ್ಮಕ ಪ್ರತಿಭಟನೆಯಲ್ಲಿ ಯಾರಾದರೂ ಭಾಗವಹಿಸಿದರೆ, ಪೊಲೀಸರು ಅವರ ಬಗ್ಗೆ ನಡವಳಿಕೆ ಪ್ರಮಾಣಪತ್ರ ಉಲ್ಲೇಖಿಸಬಹುದು ಎಂದು ಬಿಹಾರ ಡಿಜಿಪಿ ಎಸ್.ಕೆ. ಸಿಂಘಾಲ್ ಮಂಗಳವಾರ ಹೊರಡಿಸಿದ ನಿರ್ದೇಶನದಲ್ಲಿ ತಿಳಿಸಿದ್ದಾರೆ.
“ಒಬ್ಬ ವ್ಯಕ್ತಿಯು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ, ಹಿಂಸಾತ್ಮಕ ಪ್ರತಿಭಟನೆಗಳು, ರಸ್ತೆ ತಡೆ ಇತ್ಯಾದಿಗಳಲ್ಲಿ ಭಾಗಿಯಾಗಿ ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದರೆ ಮತ್ತು ಇದಕ್ಕಾಗಿ ಪೊಲೀಸರಿಂದ ದಂಡ ವಿಧಿಸಲ್ಪಟ್ಟಿದ್ದರೆ ಇದನ್ನು ಪೊಲೀಸರು ಆ ವ್ಯಕ್ತಿಯ ಕ್ಯಾರೆಕ್ಟರ್ ಸರ್ಟಿಫಿಕೇಟ್ ವರದಿಯಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಬೇಕು. ಅಂತಹ ಜನರು ಸರ್ಕಾರಿ ಉದ್ಯೋಗಗಳನ್ನು ಅಥವಾ ಸರ್ಕಾರಿ ಸ್ವಾಮ್ಯದ ಗುತ್ತಿಗೆ ಪಡೆಯಲು ಸಾಧ್ಯವಾಗದಂತಹ ಕಠಿಣ ಪರಿಣಾಮಗಳಿಗೆ ಸಿದ್ಧರಾಗಿರಬೇಕು “ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.