ನವದೆಹಲಿ: ದೆಹಲಿಯ ಗಡಿಯ ಬಳಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಟ್ವೀಟ್ ಮಾಡಿರುವ ಸ್ವೀಡನ್ ಹವಾಮಾನ ಮತ್ತು ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 3 ರಂದು, ಈಕೆ ರೈತರ ಆಂದೋಲನದ ಬಗ್ಗೆ ಟ್ವಿಟ್ ಮಾಡಿ ಕಳವಳವನ್ನು ವ್ಯಕ್ತಪಡಿಸಿದ್ದಳು. ಮಾತ್ರವಲ್ಲದೆ, ಈ ಪ್ರತಿಭಟನೆಯ ಬಗೆಗಿನ ಟೂಲ್ ಕಿಟ್ ಅನ್ನು ಕೂಡ ಬಿಡುಗಡೆ ಮಾಡಿದ್ದಳು. ಇದರಲ್ಲಿ ಪ್ರತಿಭಟನೆಗೆ ಹೇಗೆ ಬೆಂಬಲ ನೀಡಬೇಕು, ಏನು ಮಾಡಬೇಕು ಎಂಬ ಮಾಹಿತಿಯನ್ನು ಒಳಗೊಂಡಿತ್ತು. ಬಳಿಕ ಅದನ್ನು ಡಿಲೀಟ್ ಮಾಡಿ ಮತ್ತೋಂದು ಟೂಲ್ ಕಿಟ್ ಬಿಡುಗಡೆ ಮಾಡಿದ್ದಾಳೆ.
ಗ್ರೇಟಾ ವಿರುದ್ಧ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ ಮತ್ತು 153-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಕ್ಕೆ ಆಕೆಯ ವಿರುದ್ಧ ಪರ ಮತ್ತು ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.
ದೆಹಲಿಯ ಗಡಿ ಪ್ರದೇಶಗಳಲ್ಲಿ ರೈತ ಸಂಘಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಭಾರತವನ್ನು ಕೆಣಕುವ ಅಂತಾರಾಷ್ಟ್ರೀಯ ಪಿತೂರಿ ಮುನ್ನೆಲೆಗೆ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.