ನವದೆಹಲಿ: ಎಂದು ಬಿಜೆಪಿ ಹೇಳಿದೆ. ಪ್ರತಿಭಟನಾ ನಿರತ ರೈತರಿಗೆ ಕೆಲವು ವಿದೇಶಿ ಗಣ್ಯರು ನೀಡಿದ ಬೆಂಬಲ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನ ಎಂದು ಬಿಜೆಪಿ ಹೇಳಿದೆ.
ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರಿಗೆ ಬೆಂಬಲವಾಗಿ ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಮತ್ತು ಅಂತರರಾಷ್ಟ್ರೀಯ ಸಮುದಾಯದ ಹಲವಾರು ಪ್ರಮುಖ ಜನರು ಟ್ವೀಟ್ ಮಾಡಿದ ನಂತರ ಬಿಜೆಪಿಯಿಂದ ಈ ಪ್ರತಿಕ್ರಿಯೆ ಬಂದಿದೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ಗೌರವ್ ಭಾಟಿಯಾ ಅವರು, ಪ್ರತಿಭಟಿಸುವುದು ಪ್ರಜಾಪ್ರಭುತ್ವವಾಗಿದೆ ಆದರೆ ವಿದೇಶಿಯರು ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು ಎಂದಿದ್ದಾರೆ.
“ಭಾರತದ ಪ್ರಜಾಪ್ರಭುತ್ವಕ್ಕೆ ಯಾವುದೇ ವಿದೇಶಿ ಪ್ರಮಾಣಪತ್ರ ಅಗತ್ಯವಿಲ್ಲ. ಅವರು ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ, ನಾವು ಅದನ್ನು ಸಹಿಸುವುದಿಲ್ಲ. ಈ ವಿದೇಶಿ ಶಕ್ತಿಗಳ ವಿರುದ್ಧ ದೇಶವು ಒಗ್ಗಟ್ಟಿನಿಂದ ನಿಂತಿದೆ ಮತ್ತು ಅವರ ಉದ್ದೇಶದಲ್ಲಿ ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ ”ಎಂದು ಅವರು ಹೇಳಿದ್ದಾರೆ.
ಭಾರತವು ಬಲಿಷ್ಠವಾಗಿದ್ದರೆ ಮಾತ್ರ ನಾವು ಅಸ್ತಿತ್ವದಲ್ಲಿರುತ್ತವೇವೆ ಎಂದು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಎಂದು ವಿರೋಧ ಪಕ್ಷಗಳ ವಿರುದ್ಧ ಭಾಟಿಯಾ ವಾಗ್ದಾಳಿ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.