ಕೋಲ್ಕತ್ತಾ: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಿಂದ ‘ಪರಿವರ್ತನ್ ಯಾತ್ರೆ’ಗೆ ಚಾಲನೆ ನೀಡಿದ್ದಾರೆ.
“ಪಿಎಂ ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಕಸಿದುಕೊಳ್ಳುವ ಮೂಲಕ ಮಮತಾ ಅವರು ಬಂಗಾಳದ ರೈತರೊಂದಿಗೆ ಅನ್ಯಾಯ ಮಾಡಿದ್ದಾರೆ. ತನ್ನ ಅಹಂಕಾರವನ್ನು ಪೂರೈಸಲು ಅವರು ರಾಜ್ಯದಲ್ಲಿ ಕಲ್ಯಾಣ ಕಾರ್ಯಕ್ರಮ ಅನುಷ್ಠಾನವಾಗಲು ಅನುಮತಿಸಲಿಲ್ಲ” ಎಂದು ನಡ್ಡಾ ಹೇಳಿದ್ದಾರೆ.
ಐದು ಯಾತ್ರೆಗಳನ್ನು ಬಿಜೆಪಿ ನಡೆಸಲು ಉದ್ದೇಶಿಸಿದೆ. ಕೊನೆಯ ಯಾತ್ರೆ ಕಾಕ್ದ್ವಿಪ್ನಿಂದ ಕೋಲ್ಕತ್ತಾಗೆ ತೆರಳಲಿ ಎಂದು ಬಿಜೆಪಿ ಬಂಗಾಳದ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.
ಕೊನೆಯ ರಥಯಾತ್ರೆಯ ಮುಕ್ತಾಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 7 ರಂದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪ್ರವಾಸ ಹಮ್ಮಿಕೊಂಡಿದ್ದು, ಹಲವಾರು ಮೂಲಸೌಕರ್ಯ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.
Poribortan Rath Yatra of @BJP4India kicks off with @JPNadda @KailashOnline @amitmalviya @DilipGhoshBJP pic.twitter.com/kvUp069K7D
— Shehzad Jai Hind (@Shehzad_Ind) February 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.