ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಅವರು ಫೆಬ್ರವರಿ 15ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಇಂದು ಬೀಳ್ಕೊಡುಗೆ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾವುಕರಾಗಿದ್ದಾರೆ.
“ಗುಲಾಮ್ ನಬಿ ಜೀ ಅವರ ಸ್ಥಾನವನ್ನು ತುಂಬುವುದು ತುಂಬಾ ಕಷ್ಟ. ಅವರ ರೀತಿಯಲ್ಲಿ ಕೆಲಸ ಮಾಡುವುದು ಸುಲಭದ ಮಾತಲ್ಲ. ಅವರಿಗೆ ತಮ್ಮ ಪಕ್ಷದ ಬಗ್ಗೆ ಮಾತ್ರ ಕಾಳಜಿ ಇರಲಿಲ್ಲ, ಬದಲಾಗಿ ದೇಶ ಮತ್ತು ಸದನದ ಬಗ್ಗೆಯೂ ಅವರಿಗೆ ಕಾಳಜಿ ಇತ್ತು” ಎಂದಿದ್ದಾರೆ.
“ಸ್ಥಾನಗಳು ಬರುತ್ತವೆ ಹೋಗುತ್ತವೆ. ಅಧಿಕಾರ ಇರುತ್ತದೆ ಹೋಗುತ್ತದೆ. ಅಧಿಕಾರ ಬಂದಾಗ ಅದನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಗುಲಾಮ್ ನಬಿ ಆಜಾದ್ ಅವರನ್ನು ನೋಡಿ ಕಲಿಯಬೇಕಿದೆ. ನಾನು ಅವರನ್ನು ಒಬ್ಬ ಉತ್ತಮ ಸ್ನೇಹಿತನೆಂದು ಪರಿಗಣಿಸುತ್ತೇನೆ” ಎಂದಿದ್ದಾರೆ.
“ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದ ಸಂದರ್ಭದಲ್ಲಿ ಗುಜರಾತಿನ ಜನರು ಸಿಲುಕಿ ಹಾಕಿಕೊಂಡಿದ್ದ ಸಂದರ್ಭದಲ್ಲಿ ಗುಲಾಮ್ ನಬಿ ಆಜಾದ್ ಅವರು ನೆರವಾಗಿದ್ದನ್ನು ನಾನೆಂದು ಮರೆಯಲಾರೆ. ಘಟನೆಯನ್ನು ಗುಲಾಂ ಗಂಭೀರವಾಗಿ ಪರಿಗಣಿಸಿ ಅದರ ಬಗ್ಗೆ ಗಮನ ನೀಡಿದ್ದರು. ಆತನ ಕುಟುಂಬದವರೇ ಸಿಲುಕಿಕೊಂಡಿದ್ದಾರೆ ಎಂಬಂತೆ ಕಾಳಜಿ ವಹಿಸಿದರು” ಎಂದಿದ್ದಾರೆ.
ಗುಲಾಮ್ ನಬಿ ಆಜಾದ್ ಅವರ ಸಾಧನೆಗಳ ಬಗ್ಗೆ, ವ್ಯಕ್ತಿತ್ವದ ಬಗ್ಗೆ ಮಾತನಾಡುವಾಗ ಮೋದಿ ಗದ್ಗದಿತರಾದರು. ಮಾತೇ ಹೊರಡದೆ ಸಂದರ್ಭದಲ್ಲಿ ನೀರು ಕುಡಿದು ಸುಧಾರಿಸಿಕೊಂಡು ಮತ್ತೆ ಮಾತನಾಡಲು ಆರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.