ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ 3 ಕೃಷಿ ಸುಧಾರಣಾ ಕಾಯ್ದೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬುವ ಮೂಲಕ ಸಮಾಜದ ಶಾಂತಿ ಕದಡುತ್ತಿದ್ದ ಸುಮಾರು 500 ಖಾತೆಗಳನ್ನು ಟ್ವೀಟರ್ ಅಮಾನತು ಮಾಡಿದೆ.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡುವ ಪಾಕಿಸ್ಥಾನಿ, ಖಲಿಸ್ಥಾನಿ ಟ್ವೀಟರ್ ಖಾತೆಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಟ್ವೀಟರ್ ಸಂಸ್ಥೆಗೆ ಕೆಲ ದಿನಗಳ ಹಿಂದಷ್ಟೇ ಸೂಚಿಸಿತ್ತು. ಅದರ ಬೆನ್ನಲ್ಲೇ ಇದೀಗ ಸಂಸ್ಥೆ, ಸಮಾಜದ ದಾರಿ ತಪ್ಪಿಸುವ ಪೋಸ್ಟ್ಗಳನ್ನು ಮಾಡುತ್ತಿದ್ದ ಸುಮಾರು 500 ಖಾತೆಗಳನ್ನು ಅಮಾನತು ಮಾಡಿದೆ.
ಈ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಪಾರದರ್ಶಕತೆಯಿಂದ ಮಾತ್ರವೇ ಆರೋಗ್ಯಪೂರ್ಣವಾದ ಚರ್ಚೆ ನಡೆಯುವುದು ಸಾಧ್ಯ. ಇತ್ತೀಚೆಗೆ ನಡೆದ ದೆಹಲಿ ಹಿಂಸಾಚಾರದ ಬಗ್ಗೆ ಟ್ವೀಟರ್ನಲ್ಲಿ ಕೆಲವು ಅಹಿತಕರ ಪೋಸ್ಟ್ಗಳನ್ನು ಕೆಲವರು ಪ್ರಚಾರ ಮಾಡಿದ್ದು ಈ ಹಿನ್ನೆಲೆಯಲ್ಲಿ 500 ಖಾತೆಗಳನ್ನು ಅಮಾನತು ಮಾಡಲಾಗಿದೆ. ಭಾರತದ ಜೊತೆಗೆ ಸಂಸ್ಥೆಯ ತತ್ವಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೆಲವು ನೀತಿ ನಿಯಮಗಳನ್ನು ನವೀಕರಿಸಲಾಗುತ್ತಿದೆ ಎಂದು ತಿಳಿಸಿದೆ. ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ಇಂತಹ ಮಹತ್ವದ ಹೆಜ್ಜೆ ಇರಿಸಿದೆ ಎಂದು ತಿಳಿಸಿದೆ.
ಹಾಗೆಯೇ ಸಮಾಜದ ಸ್ವಾಸ್ಥ್ಯ ಕದಡುವ ಎಲ್ಲಾ ಟ್ವೀಟರ್ ಖಾತೆಗಳ ಮೇಲೆ ಸಂಸ್ಥೆ ನಿಗಾ ವಹಿಸಿದೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ನ್ಯಾಯಯುತವಾಗಿ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಟ್ವೀಟರ್ ಸಂಸ್ಥೆ ನೀಡಿದೆ.
Transparency is the foundation for promoting healthy public conversation.
Following the reports of violence in recent weeks, we're sharing a granular update on our proactive efforts to enforce our rules and defend our principles in India: https://t.co/ry557Nj94U
— Twitter Safety (@TwitterSafety) February 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.