News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಟಿಎಂಸಿಗೆ ಮತ್ತೊಂದು ಹೊಡೆತ: ರಾಜ್ಯಸಭಾ ಸ್ಥಾನಕ್ಕೆ ದಿನೇಶ್ ತ್ರಿವೇದಿ ರಾಜೀನಾಮೆ

ನವದೆಹಲಿ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ ಹಿರಿಯ ರಾಜ್ಯಸಭಾ ಸಂಸದ ದಿನೇಶ್ ತ್ರಿವೇದಿ. ಶುಕ್ರವಾರ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವನ್ನು ಅನುಭವಿಸುತ್ತಿದ್ದೇನೆ ಮತ್ತು ಪಸ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮಾತನಾಡಲು ಅವಕಾಶವೇ‌ ಇಲ್ಲದ ಸ್ಥಿತಿ ಇದೆ ಎಂದು ಅವರು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಹಿಂಸಾಚಾರದ ಬಗ್ಗೆ ನನಗೆ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ, ನನಗೆ ಉಸಿರುಗಟ್ಟುವಂತಾಗುತ್ತಿದೆ. ಇಲ್ಲಿ ಕುಳಿತುಕೊಂಡು ಏನೂ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು ಎಂದು ನನ್ನ ಆತ್ಮ ನನಗೆ‌ ಹೇಳುತ್ತಿದೆ. ನಾನು ಪಶ್ಚಿಮ ಬಂಗಾಳದ ಜನರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ ”ಎಂದು ತ್ರಿವೇದಿ ಮೇಲ್ಮನೆಯಲ್ಲಿ ಹೇಳಿದ್ದರು.

ಟಿಎಂಸಿಯಲ್ಲಿ ಉಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಏನನ್ನೂ ಬಹಿರಂಗಪಡಿಸದಿದ್ದರೂ, ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರಬಹುದು ಎಂಬ ಊಹಾಪೋಹಗಳು ಎದ್ದಿವೆ. ಕ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯ ಆಪ್ತರೆಂಜು ಪರಿಗಣಿಸಲ್ಪಟ್ಟಿರುವ ತ್ರಿವೇದಿ ಅವರು 2009 ಮತ್ತು 2019 ರ ನಡುವೆ ಲೋಕಸಭೆಯಲ್ಲಿ ಬ್ಯಾರಕ್‌ಪೋರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019 ರ ಚುನಾವಣೆಯಲ್ಲಿ ಅವರು ಬರಾಕ್‌ಪೋರ್ ಲೋಕಸಭಾ ಸ್ಥಾನವನ್ನು ಬಿಜೆಪಿಯ ಅರ್ಜುನ್ ಸಿಂಗ್ ವಿರುದ್ಧ 14,857 ಮತಗಳ ಅಂತರದಿಂದ ಕಳೆದುಕೊಂಡಿದ್ದರು.

1990-1996 ಮತ್ತು 2002 ರಿಂದ 2008 ರವರೆಗೆ ಎರಡು ಪ್ರತ್ಯೇಕ ಅವಧಿಗೆ ಅವರು ರಾಜ್ಯಸಭೆಯ ಸದಸ್ಯರಾಗಿದ್ದರು ಮತ್ತು 2020 ರ ಏಪ್ರಿಲ್‌ನಲ್ಲಿ ಮತ್ತೆ ಆಯ್ಕೆಯಾದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top