ಶ್ರೀನಗರ: ಕಳೆದ ವರ್ಷ ಕಾಶ್ಮೀರದಲ್ಲಿ ಮೂರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ಪೊಲೀಸ್ ಹತ್ಯೆಯಲ್ಲಿ ಭಾಗಿಯಾದ ಜಮ್ಮುವಿನ ಸಾಂಬಾ ಜಿಲ್ಲೆಯ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಎಲ್ಇಟಿ (ಟಿಆರ್ಎಫ್) ಎಂಬ ಭಯೋತ್ಪಾದಕ ಸಂಘಟನೆಯ ಜಹೂರ್ ಅಹ್ಮದ್ ರಾಥರ್, ಅಲಿಯಾಸ್ ಖಾಲಿದ್ ಅಲಿಯಾಸ್ ಸಾಹಿಲ್ ಎಂಬಾತನನ್ನು ಅನಂತ್ನಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಕಾಶ್ಮೀರ) ತಿಳಿಸಿದ್ದಾರೆ.
“ಆತ ಬರಿ ಬ್ರಹ್ಮಣದಲ್ಲಿ ತಲೆಮರೆಸಿಕೊಂಡಿದ್ದ. ಕಳೆದ ವರ್ಷ ಕುಲ್ಗಂನ ವೆಸು ಎಂಬಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಮತ್ತು ಕುಲ್ಗಾಂನ ಫರ್ರಾದಲ್ಲಿ ಒಬ್ಬ ಪೊಲೀಸ ಅನ್ನು ಕೊಲೆ ಮಾಡಿದ್ದ” ಎಂದು ಕುಮಾರ್ ಹೇಳಿದ್ದಾರೆ.
“ಆತ 2004 ರಲ್ಲಿ ಪಿಒಕೆ ಯಲ್ಲಿ ಭಯೋತ್ಪಾದಕ ತರಬೇತಿ ಪಡೆದುಕೊಂಡಿದ್ದ ಮತ್ತು ತನ್ನೊಂದಿಗೆ ಐದು ವಿದೇಶಿ ಭಯೋತ್ಪಾದಕರನ್ನು ಭಾರತಕ್ಕೆ ಕರೆತಂದಿದ್ದ. 2006 ರಲ್ಲಿ ಈತ ಶರಣಾಗಿದ್ದ ಆದರೆ ಕಳೆದ ವರ್ಷ ಮತ್ತೆ ರಾಜಕಾರಣಿಗಳು ಮತ್ತು ಪೊಲೀಸರನ್ನು ಕೊಲ್ಲಲು ಪ್ರಾರಂಭಿಸಿದ್ದ” ಎಂದಿದ್ದಾರೆ.
ವಿಚಾರಣೆಗಾಗಿ ಆತನನ್ನು ಕಾಶ್ಮೀರಕ್ಕೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಕುಲ್ಗಂನಲ್ಲಿ ಮೂವರು ಬಿಜೆಪಿ ಕಾರ್ಯಕರ್ತರಾದ ಫಿಡಾ ಹುಸೇನ್ ಯಾತೂ, ಉಮರ್ ರಶೀದ್ ಬೀಘ್ ಮತ್ತು ಉಮರ್ ರಂಜಾನ್ ಹಜಮ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.
ಪಕ್ಷದ ಕಾರ್ಯಕರ್ತರನ್ನು ಭಯೋತ್ಪಾದಕರು ಹತ್ಯೆಗೈದಿರುವುದನ್ನು ಪ್ರಧಾನಿ ಮೋದಿ ಖಂಡಿಸಿದ್ದರು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.