ನವದೆಹಲಿ: ವಾಟ್ಸಾಪ್ನ ಇತ್ತೀಚಿನ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೋಮವಾರ ಫೇಸ್ಬುಕ್ ಮತ್ತು ವಾಟ್ಸಾಪ್ಗೆ ನೋಟಿಸ್ ಜಾರಿಗೊಳಿಸಿದೆ.
ಬಳಕೆದಾರರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನರ ಗೌಪ್ಯತೆಯನ್ನು ಕಾಪಾಡಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
“ವಾಟ್ಸಾಪ್ನಿಂದ ಸಂದೇಶಗಳ ಸರ್ಕ್ಯೂಟ್ ಬಹಿರಂಗಗೊಳ್ಳುತ್ತದೆ ಎಂಬ ಆತಂಕವಿದೆ” ಎಂದು ನ್ಯಾಯಪೀಠ ಹೇಳಿದೆ, ನಾಗರಿಕರು ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುವ ಬಗ್ಗೆ ಹೆಚ್ಚಿನ ಆತಂಕವನ್ನು ಹೊಂದಿದ್ದಾರೆ ಮತ್ತು ಅವರ ಡೇಟಾ ಮತ್ತು ಚಾಟ್ಗಳನ್ನು ಇತರರೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಅವರು ಭಾವಿಸುತ್ತಿದ್ದಾರೆ ಎಂದಿದೆ.
“ವಾಟ್ಸಾಪ್ ಮತ್ತು ಫೇಸ್ಬುಕ್ ಎರಡು ಅಥವಾ ಮೂರು ಟ್ರಿಲಿಯನ್ ಡಾಲರ್ ಕಂಪೆನಿಗಳಾಗಿರಬಹುದು ಆದರೆ ಜನರು ತಮ್ಮ ಗೌಪ್ಯತೆಯನ್ನು ಹಣಕ್ಕಿಂತ ಹೆಚ್ಚು ಗೌರವಿಸುತ್ತಾರೆ. ಅವರ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ” ಎಂದು ಫೇಸ್ಬುಕ್ ಮತ್ತು ವಾಟ್ಸಾಪ್ ಅನ್ನು ಪ್ರತಿನಿಧಿಸಿ ಹಾಜರಾದ ಸಲಹೆಗಾರರಿಗೆ ನ್ಯಾಯಪೀಠ ತಿಳಿಸಿದೆ.
ವಿಚಾರಣೆಯ ಸಮಯದಲ್ಲಿ, ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅರವಿಂದ ದತಾರ್ ಕ್ರಮವಾಗಿ ವಾಟ್ಸಾಪ್ ಮತ್ತು ಫೇಸ್ಬುಕ್ ಪರವಾಗಿ ಹಾಜರಾಗಿದ್ದು ಆರೋಪಗಳನ್ನು ನಿರಾಕರಿಸಿದರು ಮತ್ತು ಇದನ್ನು “ತಪ್ಪು ಮಾಹಿತಿ” ಎಂದು ಕರೆದರು. ಅರ್ಜಿದಾರ ಇಂಟರ್ನೆಟ್ ಫ್ರೀಡಮ್ ಫೌಂಡೇಶನ್ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, ಹೆಚ್ಚಿನ ಪ್ರಮಾಣದ ಮೆಟಾಡೇಟಾವನ್ನು ಲಾಭಕ್ಕಾಗಿ ಹಂಚಿಕೊಳ್ಳಲಾಗಿದೆ ಮತ್ತು ಇದು ಗೌಪ್ಯತಾ ಕಳವಳವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.