ನವದೆಹಲಿ: ಜನವರಿ 26 ರಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ದೆಹಲಿಯ ಪಿತಮ್ ಪುರ ಬಳಿ ದೆಹಲಿ ಪೊಲೀಸರು ಮಂಗಳವಾರ ಪ್ರಕರಣದ ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಮನಿಂದರ್ ಸಿಂಗ್ ಅನ್ನು ದೆಹಲಿ ಪೊಲೀಸರ ವಿಶೇಷ ಘಟಕ ವಶಕ್ಕೆ ತೆಗೆದುಕೊಂಡಿದ್ದು, ಸ್ವರೂಪ್ ನಗರದ ಆತನ ಮನೆಯಿಂದ ಎರಡು ಖಡ್ಗಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಎರಡು ಖಡ್ಗಗಳನ್ನು ಈತ ಝಳಪಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋದಿಂದಾಗಿ ಆರೋಪಿಯನ್ನು ಸೆರೆಹಿಡಿಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿವಿಧ ಗುಂಪುಗಳ ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ಗಳನ್ನು ನೋಡಿ ಈ ರೀತಿ ವರ್ತಿಸಿದ್ದೇನೆ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆತ ದೆಹಲಿಯ ಸಿಂಘು ಗಡಿಗೆ ಆಗಾಗ ಭೇಟಿ ನೀಡುತ್ತಿದ್ದ ಮತ್ತು ಅಲ್ಲಿನ ನಾಯಕರು ಮಾಡಿದ ಭಾಷಣಗಳಿಂದ ಅವನು ಹೆಚ್ಚು ಪ್ರೇರಿತನಾಗಿದ್ದ ಎನ್ನಲಾಗಿದೆ.
ಇದಲ್ಲದೆ, ಸಿಂಗ್ ತನ್ನ ನೆರೆಹೊರೆಯ ಇತರ ಆರು ಜನರನ್ನು ಪ್ರೇರೇಪಿಸಿ ಪ್ರತಿಭಟನೆಗೆ ಕರೆ ತಂದಿದ್ದಾನೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.