ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಂಗಳವಾರದಂದು ಬಡತನ ರೇಖೆಗಿಂತ ಕೆಳಗೆ ಇರುವ ರೇಷನ್ ಕಾರ್ಡ್ (ಬಿಪಿಎಲ್ ಕಾರ್ಡ್) ಹೊಂದಿರುವ ಶ್ರೀಮಂತರ ವಿರುದ್ಧ ಮಹತ್ವದ ಎಚ್ಚರಿಕೆಯನ್ನು ಹೊರಡಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕಾದ ಅರ್ಹತೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ 2 ದಿನದ ನಂತರ ಮುಖ್ಯಮಂತ್ರಿ ಈ ಮಾತನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅನೇಕ ಶ್ರೀಮಂತರು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರಬೇಕಾದ ಯಾವುದೇ ಅರ್ಹತೆ ಇಲ್ಲದವರಿಗೆ ಸರ್ಕಾರ ಸ್ವಯಂಪ್ರೇರಣೆಯಿಂದ ಬಿಪಿಎಲ್ ಕಾರ್ಡ್ಗಳನ್ನು ಒಪ್ಪಿಸಲು ಸಮಯಾವಕಾಶ ನೀಡಿದೆ.
“ಅರ್ಹ ಫಲಾನುಭವಿಗಳಿಗೆ ನಾವು ಸಾರ್ವಜನಿಕ ವಿತರಣಾ ಯೋಜನೆ (ಪಿಡಿಎಸ್) ಅಡಿಯಲ್ಲಿ ಸರಿಯಾದ ಧಾನ್ಯ ಪೂರೈಕೆಯನ್ನು ಕಾಯ್ದುಕೊಳ್ಳಬೇಕು ಮತ್ತು ಅನರ್ಹ ವ್ಯಕ್ತಿಗಳು ಪ್ರಯೋಜನಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಕ್ರಮ ಕೈಗೊಳ್ಳಬೇಕಾಗಿದೆ” ಎಂದು ಸಿಎಂ ಹೇಳಿದರು.
ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ಕಾನೂನು ಕ್ರಮವನ್ನು ಎದುರಿಸಲು ಬಯಸದಿದ್ದರೆ ಸ್ವಯಂಪ್ರೇರಣೆಯಿಂದ ಕಾರ್ಡ್ ಅನ್ನು ಹಿಂದಿರುಗಿಸಬೇಕು ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.