ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಳವಾಗಿದ್ದು, ಇದು 370 ನೇ ವಿಧಿ ರದ್ದತಿಯ ಬಗ್ಗೆ ಹರಡಿಸಲಾಗಿದ್ದ ನಕಾರಾತ್ಮಕ ವದಂತಿಗಳನ್ನು ಸುಳ್ಳು ಮಾಡಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್ ಹೇಳಿದ್ದಾರೆ.
ಫೆಡರೇಶನ್ ಆಫ್ ಅಸೋಸಿಯೇಷನ್ಸ್ ಇನ್ ಇಂಡಿಯಾ ಟೂರಿಸಂ ಆಂಡ್ ಹಾಸ್ಪಿಟಾಲಿಟಿ ಆಯೋಜಿಸಿದ್ದ ಮೂರನೇ ಭಾರತ ಪ್ರವಾಸೋದ್ಯಮ ಮಾರ್ಟ್ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, 2020 ರ ಇದೇ ಅವಧಿಗೆ ಹೋಲಿಸಿದರೆ ಪ್ರವಾಸಿಗರು 2021 ರ ಜನವರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದಿದ್ದಾರೆ.
2020 ರ ಜನವರಿಯಲ್ಲಿ ಸುಮಾರು 3,750 ಪ್ರವಾಸಿಗರು ಶ್ರೀನಗರಕ್ಕೆ ಭೇಟಿ ನೀಡಿದರೆ, 2021 ರ ಜನವರಿಯಲ್ಲಿ 19,000 ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದಿದ್ದಾರೆ.
“ಆರ್ಟಿಕಲ್ 370 ರ ರದ್ದುಗೊಳಿಸುವಿಕೆಯಿಂದಾಗಿ ಜಮ್ಮು-ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರುತ್ತದೆ ಎಂದು ನಿರಂತರವಾಗಿ ಹೇಳಲಾಗಿತ್ತು. ಆದರೆ ದತ್ತಾಂಶ ಇದನ್ನು ಸುಳ್ಳು ಮಾಡಿದೆ” ಎಂದು ಸಚಿವ ಪ್ರಹ್ಲಾದ್ ಪಟೇಲ್ ಹೇಳಿದ್ದಾರೆ.
“ಗೋವಾದಂತಹ ಇತರ ಕೆಲವು ರಾಜ್ಯಗಳು ಸಹ ಚೇತರಿಕೆಯ ಲಕ್ಷಣಗಳನ್ನು ತೋರಿಸಲಾರಂಭಿಸಿವೆ, ಆದರೆ ಮಹಾರಾಷ್ಟ್ರ ಮತ್ತು ಕೇರಳದಂತಹ ರಾಜ್ಯಗಳು ಇನ್ನೂ ಪ್ರವಾಸಿಗರಿಗೆ ಮುಕ್ತವಾಗಿಲ್ಲ. ಅಂತರರಾಷ್ಟ್ರೀಯ ಪ್ರವಾಸವನ್ನು ಸ್ವಲ್ಪ ಸಮಯದವರೆಗೆ ನಿರ್ಬಂಧಿಸಲಾಗುತ್ತಿದೆ. ನಾವು ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕಾಗಿದೆ” ಎಂದು ಅವರು ಹೇಳಿದರು.
ಸೇವಾ ಪೂರೈಕೆದಾರರು ಮತ್ತು ಪ್ರವಾಸೋದ್ಯಮದಲ್ಲಿ ಭಾಗಿಯಾಗಿರುವ ಇತರರು ಸಾಥಿ ಮತ್ತು ನಿಧಿಯಂತಹ ಪೋರ್ಟಲ್ಗಳಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕೆಂದು ಸಚಿವರು ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.