ಕೇರಳ: ಬಾಂಗ್ಲಾದೇಶದ ಭಯೋತ್ಪಾದಕ ಸಂಘಟನೆ ಜಮಾತ್-ಉಲ್- ಮುಜಾಹಿದ್ದೀನ್ ನ ಜೊತೆ ನಂಟು ಹೊಂದಿರುವುದಾಗಿ ಬಂಧಿತರಾಗಿರುವ ಕೇರಳದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಇಬ್ಬರು ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಬಹಿರಂಗಪಡಿಸಿದ್ದಾರೆ.
ಕೇರಳದ ಪಿಎಫ್ಐ ಸದಸ್ಯರಾದ ಅಸಾದ್ ಬದ್ರುದ್ದೀನ್ ಮತ್ತು ಫಿರೋಜ್ ಖಾನ್ ಅವರನ್ನು ಲಕ್ನೋದ ಗುಡಂಬಾ ಪ್ರದೇಶದಿಂದ ವಿಶೇಷ ಕಾರ್ಯಪಡೆ ಇತ್ತೀಚಿಗೆ ಬಂಧಿಸಿದೆ.
ಪಿಎಫ್ಐ ಕಾರ್ಯಕರ್ತರಿಂದ ಬಾರಿ ಪ್ರಮಾಣದ ಸ್ಫೋಟಕಗಳು, ಶಸ್ತ್ರಾಸ್ತ್ರಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಪ್ರಶಾಂತ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಅನ್ಸಾದ್ ಬದ್ರುದ್ದೀನ್ ಮತ್ತು ಫಿರೋಜ್ ಖಾನ್ ಅವರನ್ನು ಗುಡಂಬಾ ಪ್ರದೇಶದ ಕುಕ್ರೈಲ್ ಟ್ರೈಸೆಕ್ಷನ್ ನಿಂದ ಬಂಧಿಸಲಾಗಿದೆ. ಮತ್ತು ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವಸಂತ್ ಪಂಚಮಿಯನ್ನು ಕೇಂದ್ರವಾಗಿರಿಸಿಕೊಂಡು ಭಯೋತ್ಪಾದಕ ದಾಳಿಯನ್ನು ನಡೆಸುವ ಯೋಜನೆ ಇವರಿಗಿತ್ತು ಎನ್ನುವ ಆಘಾತಕಾರಿ ಮಾಹಿತ ಬಂಧನದ ವೇಳೆ ತಿಳಿದುಬಂದಿದೆ. ಭಾರತದಲ್ಲಿ ಭಯೋತ್ಪಾದಕ ಸ್ಫೋಟಕಗಳನ್ನು ನಡೆಸಲು ಸ್ಫೋಟಕ ಮತ್ತು ಬಂದೂಕುಗಳಿಗಾಗಿ ಇವರು ಬಾಂಗ್ಲಾದ ಜಮಾಅತ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಹಾಯ ಪಡೆಯಲು ಕೆಲವು ತಿಂಗಳ ಹಿಂದೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು ಎಂಬುದನ್ನು ಇಬ್ಬರು ಆರೋಪಿಗಳು ಬಹಿರಂಗಪಡಿಸಿದ್ದಾರೆ” ಎಂದಿದ್ದಾರೆ.
ಜಮ್ಮತ್-ಉಲ್-ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯನ್ನು ಬಾಂಗ್ಲಾದೇಶ ಸರ್ಕಾರವು ಫೆಬ್ರವರಿ 2005 ರಲ್ಲಿ ನಿಷೇಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.