ನವದೆಹಲಿ: ಜಂತರ್ ಮಂತರ್ನಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ಸ್ವರಾಜ್ ಅಭಿಯಾನ್ ಮುಖಂಡ ಯೋಗೇಂದ್ರ ಯಾದವ್ ಅವರನ್ನು ಸೋಮವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.
ರೈತರ ಪರವಾಗಿ ‘ಟ್ರ್ಯಾಕ್ಟರ್ ಮಾಚ್’ ಎಂಬ ಪ್ರತಿಭಟನೆಯನ್ನು ಎಎಪಿಯ ಮಾಜಿ ಬಂಡಾಯ ನಾಯಕರಾದ ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಆರಂಭಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯವರೆಗೆ ಈ ಪ್ರತಿಭಟನೆ ಮುಂದುವರೆಯಲಿದೆ.
ನಿನ್ನೆ ಇವರು ಪ್ರಧಾನಮಂತ್ರಿಯವರ ನಿವಾಸದ ಮುಂದೆ ಪ್ರತಿಭಟನೆಯ ಸಂಕೇತವಾಗಿ ನೇಗಿಲನ್ನು ಇಡಲು ಪ್ರಯತ್ನಿಸಿದ್ದಾರೆ. ಇದಕ್ಕೆ ಪೊಲೀಸರು ಅಡ್ಡಿಯುಂಟು ಮಾಡಿದ್ದಾರೆ. ಬಳಿಕ ಪ್ರತಿಭಟನಾಕಾರರ, ಪೊಲೀಸರ ನಡುವೆ ಜಟಾಪಟಿ ನಡೆದಿದೆ.
ಇದೀಗ ಯಾದವ್ ಅವರು ಪೊಲೀಸರು ಎಲ್ಲಾ ಪ್ರತಿಭಟನಾಕಾರರನ್ನು 4 ಗಂಟೆಗಳ ಕಾಲ ಬಂಧಿಸಿದ್ದರು, ನನ್ನನ್ನೂ ಬಂಧಿಸಿ ಹೊಡೆದಿದ್ದಾರೆ, ಎಳೆದಾಡಿದ್ದಾರೆ, ನೂಕಿದ್ದಾರೆ ಎಂದು ಆರೋಪಿಸಿದ್ದಾರೆ.
ಯಾದವ್ ಅವರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.