ನವದೆಹಲಿ: ಈ ಹಣಕಾಸು ವರ್ಷದಲ್ಲಿ ಕೇಂದ್ರವು ಆರೋಗ್ಯ ಕ್ಷೇತ್ರಕ್ಕೆ ನಿಗದಿಪಡಿಸಿದ ಬಜೆಟ್ ಹಂಚಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭೂತಪೂರ್ವ ಎಂದು ಬಣ್ಣಿಸಿದ್ದಾರೆ.
“ಆರೋಗ್ಯ ಕ್ಷೇತ್ರಕ್ಕೆ ಈಗ ನಿಗದಿಪಡಿಸಿರುವ ಬಜೆಟ್ ಅಸಾಧಾರಣವಾಗಿದೆ. ಇದು ಈ ವಲಯಕ್ಕೆ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಕೋವಿಡ್-19 ಸಾಂಕ್ರಾಮಿಕವು ಭವಿಷ್ಯದಲ್ಲಿ ಇದೇ ರೀತಿಯ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವ ಪಾಠವನ್ನು ನಮಗೆ ಕಲಿಸಿದೆ” ಎಂದು ಮೋದಿ ಅವರು ಆರೋಗ್ಯ ವಲಯದಲ್ಲಿ ಬಜೆಟ್ ಅನುಷ್ಠಾನದ ಕುರಿತು ವೆಬ್ನಾರ್ನಲ್ಲಿ ಹೇಳಿದ್ದಾರೆ.
ಸಾಂಕ್ರಾಮಿಕ ಸಮಯದಲ್ಲಿ ಭಾರತದ ಆರೋಗ್ಯ ಕ್ಷೇತ್ರವು ತೋರಿಸಿರುವ ಶಕ್ತಿಯನ್ನು, ಅನುಭವವನ್ನು ಜಗತ್ತು ಬಹಳ ಸೂಕ್ಷ್ಮವಾಗಿ ಗಮನಿಸಿದೆ ಎಂದು ಎಂದಿದ್ದಾರೆ.
“ಭಾರತದ ಆರೋಗ್ಯ ಕ್ಷೇತ್ರದ ಖ್ಯಾತಿ ಮತ್ತು ವಿಶ್ವಾಸ ಪ್ರಪಂಚದಾದ್ಯಂತ ಹೊಸ ಮಟ್ಟದಲ್ಲಿದೆ” ಎಂದಿದ್ದಾರೆ.
“ವೈದ್ಯಕೀಯ ಸಲಕರಣೆಗಳಿಂದ ಹಿಡಿದು ಔಷಧಿಗಳವರೆಗೆ, ವೆಂಟಿಲೇಟರ್ಗಳಿಂದ ಲಸಿಕೆಗಳವರೆಗೆ, ವೈಜ್ಞಾನಿಕ ಸಂಶೋಧನೆಯಿಂದ ಕಣ್ಗಾವಲು ಮೂಲಸೌಕರ್ಯಗಳವರೆಗೆ, ವೈದ್ಯರಿಂದ ಹಿಡಿದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರವರೆಗೆ ನಾವು ಎಲ್ಲದರ ಬಗ್ಗೆ ಗಮನ ಹರಿಸಬೇಕು ಮತ್ತು ಭವಿಷ್ಯದಲ್ಲಿ ಯಾವುದೇ ಆರೋಗ್ಯ ವಿಪತ್ತುಗಳಿಗೆ ಉತ್ತಮವಾಗಿ ಸಿದ್ಧರಾಗಿರಬೇಕು” ಎಂದು ಮೋದಿ ಒತ್ತಿ ಹೇಳಿದ್ದಾರೆ.
ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಲು ಸರ್ಕಾರ ನಾಲ್ಕು ರಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.
“ಅನಾರೋಗ್ಯವನ್ನು ತಡೆಗಟ್ಟುವುದು ಮತ್ತು ಸ್ವಾಸ್ಥ್ಯವನ್ನು ಉತ್ತೇಜಿಸುವುದು ಮೊದಲ ಆದ್ಯತೆಯಾಗಿದೆ. ಎರಡನೇಯದು ಬಡವರಿಗೆ ಅಗ್ಗದ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡುವುದು. ಆಯುಷ್ಮಾನ್ ಭಾರತ್ ಯೋಜನೆ ಮತ್ತು ಪ್ರಧಾನ್ ಮಂತ್ರಿ ಜನ್ ಔಷಧಿ ಕೇಂದ್ರಗಳು ಈ ಕಾರ್ಯ ಮಾಡುತ್ತಿವೆ. ಮೂರನೇಯದು ಆರೋಗ್ಯ ಮೂಲಸೌಕರ್ಯ ಮತ್ತು ಆರೋಗ್ಯ ವೃತ್ತಿಪರರ ಪ್ರಮಾಣ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದು ಮತ್ತು ನಾಲ್ಕನೇಯದು ಸಮಸ್ಯೆಗಳನ್ನು ನಿವಾರಿಸಲು ಮಿಷನ್ ಮೋಡ್ನಲ್ಲಿ ಕೆಲಸ ಮಾಡುವುದು” ಎಂದು ಮೋದಿ ಹೇಳಿದ್ದಾರೆ.
2025 ರ ವೇಳೆಗೆ ದೇಶದಿಂದ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.