ಬೆಂಗಳೂರು: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸುವ ಕೆಲಸವಾಗುತ್ತಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ನಗರದ ನಂದಿ ಗಿರಿಧಾಮದಲ್ಲಿಂದು ಮಾತನಾಡಿದ ಸಚಿವರು, ಪ್ರಕರಣ ನಡೆದ 24 ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಮಾಡುತ್ತಿದ್ದಾರೆ. ತಪ್ಪು ಮಾಡಿದವರು ಯಾರೇ ಆಗಲಿ ಅವರು ಆರೋಪಿಗಳೇ. ಅವರಿಗೆ ಸರಿಯಾದ ಶಿಕ್ಷೆಯಾಗಲಿದೆ. ಅವರ್ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟದ ಸಂದರ್ಭದಲ್ಲಿಯೇ ಅಕ್ರಮ ಗಣಿಗಾರಿಕೆ, ಅಕ್ರಮ ಕ್ವಾರಿಗಳನ್ನು ನಡೆಸುವುದು, ಪರವಾನಗಿ ಇಲ್ಲದೆ ಸ್ಫೋಟಕಗಳನ್ನು ಬಳಕೆ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿತ್ತು. ಈ ಭಯದಲ್ಲಿಯೇ ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಜಿಲೆಟಿನ್ ಅನ್ನು ಸ್ಥಳಾಂತರ ಮಾಡುವ ಪ್ರಯತ್ನ ನಡೆದಿದೆ. ಈ ವೇಳೆ ಸ್ಫೋಟ ಸಂಭವಿಸಿದೆ. ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸುವ ಮೂಲಕ ಸರ್ಕಾರ ಇಂತಹ ಅಕ್ರಮ ಎಸಗುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ರವಾನೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.