ನವದೆಹಲಿ: ಮಮತಾ ಬ್ಯಾನರ್ಜಿ ಆಳ್ವಿಕೆಯ ಪಶ್ಚಿಮ ಬಂಗಾಳದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ಆ ರಾಜ್ಯದಲ್ಲಿ ಅಧಿಕಾರದಿಂದ ಕೆಳಗಿಳಿಸುವ ಗುರಿಯೊಂದಿಗೆ ‘ಲೋಖೋ ಸೋನಾರ್ ಬಾಂಗ್ಲಾ’ ಅಭಿಯಾನವನ್ನು ಗುರುವಾರ ಪ್ರಾರಂಭಿಸಿದೆ.
ಬುಧವಾರ ರಾತ್ರಿ ರಾಜ್ಯಕ್ಕೆ ಆಗಮಿಸಿದ್ದ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಣಾಳಿಕೆ ಕ್ರೌಡ್ಸೋರ್ಸಿಂಗ್ ಅಭಿಯಾನದ ಜೊತೆಗೆ ಈ ಅಭಿಯಾನವನ್ನು ಪ್ರಾರಂಭಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಉಪಸ್ಥಿತರಿದ್ದರು.
“ನಾವು ಜನರಿಂದ 2 ಕೋಟಿಗೂ ಹೆಚ್ಚು ಸಲಹೆಗಳನ್ನು ಸ್ವೀಕರಿಸುತ್ತೇವೆ. ಬಂಗಾಳದಾದ್ಯಂತ ಸುಮಾರು 30,000 ಸಲಹಾ ಪೆಟ್ಟಿಗೆಗಳನ್ನು ನಾವು ಲಭ್ಯಗೊಳಿಸುತ್ತೇವೆ. 294 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 100 ಪೆಟ್ಟಿಗೆಗಳನ್ನು ಇಡಲಾಗುವುದು. ನಮ್ಮ ಕಾರ್ಯಕರ್ತರು 50 ಪೆಟ್ಟಿಗೆಗಳೊಂದಿಗೆ ಮನೆ ಮನೆಗೆ ತೆರಳಲಿದ್ದಾರೆ ಮತ್ತು 50 ಪೆಟ್ಟಿಗೆಯನ್ನು ಆಯಕಟ್ಟಿನ ಸ್ಥಳಗಳಲ್ಲಿ ಇರಿಸಲಾಗುತ್ತದೆ” ಎಂದು ನಡ್ಡಾ ಹೇಳಿದ್ದಾರೆ.
ಈ ಅಭಿಯಾನವು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್ 3 ರಿಂದ 20 ರವರೆಗೆ ನಡೆಯಲಿದೆ ಎಂದು ನಡ್ಡಾ ಕೋಲ್ಕತ್ತಾದಲ್ಲಿ ತಿಳಿಸಿದ್ದಾರೆ. “ಸ್ವಾಮಿ ವಿವೇಕಾನಂದ, ರವೀಂದ್ರನಾಥ ಟ್ಯಾಗೋರ್, ಬಂಕಿಮ್ ಚಂದ್ರ ಚಟರ್ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಶ್ಯಾಮಾ ಪ್ರಸಾದ್ ಮುಖರ್ಜಿ, ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಷ್ಠಿತ ಇತಿಹಾಸವನ್ನು ಸೇರ್ಪಡೆಗೊಳಿಸುವುದರೊಂದಿಗೆ ನಾವು ‘ಸೋನಾರ್ ಬಾಂಗ್ಲಾ’ ರಚಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.