ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಮತ್ತು ಇತರ ಎಲ್ಲ ಕ್ಷೇತ್ರಗಳ ಪರಿಸ್ಥಿತಿ ಕುರಿತು ಭಾರತ ಮತ್ತು ಪಾಕಿಸ್ಥಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ)ಗಳು ಮಾತುಕತೆ ನಡೆಸಿದ್ದಾರೆ ಎಂದು ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ.
ಉಭಯ ದೇಶಗಳ ಡಿಜಿಎಂಒಗಳು “ಹಾಟ್ಲೈನ್ ಸಂಪರ್ಕದ ಸ್ಥಾಪಿತ ಕಾರ್ಯವಿಧಾನದ ಕುರಿತು ಚರ್ಚೆಗಳನ್ನು ನಡೆಸಿದ್ದಾರೆ” ಎಂದು ಸಚಿವಾಲಯ ಹೇಳಿದೆ. ಎರಡು ಕಡೆಯವರು “ನಿಯಂತ್ರಣ ರೇಖೆ ಮತ್ತು ಇತರ ಎಲ್ಲ ಕ್ಷೇತ್ರಗಳ ಪರಿಸ್ಥಿತಿಯನ್ನು ಮುಕ್ತ, ಸ್ಪಷ್ಟ ಮತ್ತು ಸೌಹಾರ್ದಯುತ ವಾತಾವರಣದಲ್ಲಿ ಪರಿಶೀಲಿಸಿದ್ದಾರೆ” ಎಂದು ಅದು ಹೇಳಿದೆ.
“ಗಡಿಗಳಲ್ಲಿ ಪರಸ್ಪರ ಲಾಭದಾಯಕ ಮತ್ತು ಸುಸ್ಥಿರ ಶಾಂತಿಯನ್ನು ಸಾಧಿಸುವ ಹಿತದೃಷ್ಟಿಯಿಂದ, ಇಬ್ಬರು ಡಿಜಿಎಂಒಗಳು ಶಾಂತಿಯನ್ನು ಭಂಗಗೊಳಿಸುವ ಮತ್ತು ಹಿಂಸಾಚಾರಕ್ಕೆ ಕಾರಣವಾಗುವ ಪ್ರವೃತ್ತಿಯನ್ನು ಹೊಂದಿದ ಪರಸ್ಪರರ ಪ್ರಮುಖ ಸಮಸ್ಯೆಗಳು ಮತ್ತು ಕಳವಳಗಳನ್ನು ಪರಿಹರಿಸಲು ಒಪ್ಪಿಕೊಂಡರು ” ಎಂದು ಸಚಿವಾಲಯ ತಿಳಿಸಿದೆ.
2021 ರ ಫೆಬ್ರವರಿ 24 ಮತ್ತು 25 ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ನಿಯಂತ್ರಣ ರೇಖೆ ಮತ್ತು ಇತರ ಎಲ್ಲ ಕ್ಷೇತ್ರಗಳಲ್ಲಿ ಗುಂಡಿನ ದಾಳಿ ನಡೆಯದಂತೆ ಎಲ್ಲಾ ಒಪ್ಪಂದಗಳು, ತಿಳುವಳಿಕೆಗಳು ಮತ್ತು ಕಟ್ಟುನಿಟ್ಟಾಗಿ ನಿಯಮ ಪಾಲಿಸಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ಅದು ಹೇಳಿದೆ.
“ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಅಥವಾ ತಪ್ಪು ತಿಳುವಳಿಕೆಯನ್ನು ಪರಿಹರಿಸಲು ಹಾಟ್ಲೈನ್ ಸಂಪರ್ಕ ಮತ್ತು ಗಡಿ ಧ್ವಜ ಸಭೆಗಳಂತಹ ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಳಸಿಕೊಳ್ಳಲಾಗುವುದು ಎಂದು ಎರಡೂ ಕಡೆಯವರು ಪುನರುಚ್ಚರಿಸಿದ್ದಾರೆ” ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.