ನವದೆಹಲಿ: ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಅವರನ್ನು ಕೊಲೆ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಸಾಧ್ಯತೆ ಇದೆ.
ಮಧ್ಯಪ್ರದೇಶ ರಾಜ್ಯದ ಅನುಪ್ಪೂರು ಜಿಲ್ಲೆಯಲ್ಲಿ 2012 ರಲ್ಲಿ ನಡೆದ ಕೊಲೆ ಯತ್ನ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ನ್ಯಾಯಾಲಯವು ಟಿಕಾಯತ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಜೈಥಾರಿ ಪ್ರದೇಶದ ವಿದ್ಯುತ್ ಸ್ಥಾವರ ವಿರುದ್ಧ ಟಿಕಾಯತ್ ನಡೆಸಿದ್ದ ಪ್ರತಿಭಟನೆಯು ಹಿಂಸಾತ್ಮಕವಾಗಿ ಪರಿಣಮಿಸಿ, ಪೊಲೀಸರ ಮೇಲೆ ಹಲ್ಲೆ ಮತ್ತು ವಾಹನಗಳನ್ನು ಸುಟ್ಟುಹಾಕುವಿಕೆಗೆ ಕಾರಣವಾಗಿತ್ತು. ಟಿಕಾಯತ್ ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಐಪಿಸಿಯ ಸೆಕ್ಷನ್ 147 (ಗಲಭೆ), 148 (ಸಶಸ್ತ್ರ ಆಯುಧದಿಂದ ಗಲಭೆ), 149 (ಕಾನೂನುಬಾಹಿರ ಸಭೆ), 307 (ಕೊಲೆ ಯತ್ನ) ಅಡಿಯಲ್ಲಿ ಬಂಧಿಸಲಾಗಿತ್ತು.
ಆದರೆ 2012 ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ವಿಚಾರಣೆಗಳಿಗಾಗಿ ಟಿಕಾಯತ್ ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ನಂತರ ಅವರ ವಿರುದ್ಧ 2016 ರಲ್ಲಿ ಬಂಧನ ವಾರಂಟ್ ಹೊರಡಿಸಲಾಯಿತು.
ಬಂಧನ ವಾರಂಟ್ ಬಗ್ಗೆ ನಾವು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅನುಪ್ಪೂರು ಪೊಲೀಸ್ ವರಿಷ್ಠಾಧಿಕಾರಿ ಮಂಗಿಲಾಲ್ ಸೋಲಂಕಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.