ವಿಜಯಪುರ: ಜಿಲ್ಲೆಯ ಬುರಾಣಾಪುರ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
95 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ನಿರೀಕ್ಷೆಯಂತೆಯೇ ಈ ಕಾಮಗಾರಿ ಸಾಗುತ್ತಿರುವುದು ತೃಪ್ತಿ ನೀಡಿದೆ ಎಂದು ತಿಳಿಸಿದ್ದಾರೆ. ಎರಡನೇ ಹಂತದ ಕಾಮಗಾರಿಗಳು ಸುಮಾರು 125 ಕೋಟಿ ರೂ. ವೆಚ್ಚದಲ್ಲಿ ನೆರವೇರಲಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಡ್ಯೂಪ್ಲೆಕ್ಸ್ ಕೋರ್ಟ್ ನಿರ್ಮಾಣ ಕಾಮಗಾರಿಯನ್ನೂ ಅವರು ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಜೋಡಣೆ, ಇಂಟರ್ನೆಟ್ ಸಂಪರ್ಕ ಮೊದಲಾದ ಕೆಲಸಗಳು ಸಾಗುತ್ತಿವೆ. ಈ ಕಾಮಗಾರಿಗಳೂ ತೃಪ್ತಿದಾಯಕವಾಗಿ ಸಾಗುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.