ಕೋಲ್ಕತ್ತಾ: ಕಾಂಗ್ರೆಸ್ ಮತ್ತು ಎಡಪಕ್ಷಗಳ ಜಾತ್ಯಾತೀತ ಮುಖವಾಡ ಕಳಚಿ ಬಿದ್ದಿದೆ. ಪಶ್ಚಿಮಬಂಗಾಳ ಚುನಾವಣೆಯಲ್ಲಿ ಕಾಂಗ್ರೆಸ್- ಎಡರಂಗ ಮತ್ತು ‘ಇಸ್ಲಾಮಿಸ್ಟ್’ ಇಂಡಿಯನ್ ಸೆಕ್ಯುಲರ್ ಫ್ರಂಟ್ ಜಂಟಿಯಾಗಿ ಸ್ಪರ್ಧೆ ನಡೆಸಲಿವೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರಿಂದಲೇ ಅಪಸ್ವರ ಕೇಳಿಬಂದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ‘ಇಸ್ಲಾಮಿಸ್ಟ್’ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಜೊತೆ ಜಂಟಿಯಾಗಿ ಸ್ಪರ್ಧಿಸುವ ಎಡ-ಕಾಂಗ್ರೆಸ್ ಮೈತ್ರಿಕೂಟದ ನಿರ್ಧಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಹಿರಿಯ ಮುಖಂಡ ಆನಂದ್ ಶರ್ಮಾ ಅವರು ತಮ್ಮ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋಮುವಾದವನ್ನು ನಿರ್ವಹಿಸುವಲ್ಲಿ ಕಾಂಗ್ರೆಸ್ ಪಕ್ಷದ ಆಯ್ದ ನಿಲುವನ್ನು ಆನಂದ್ ಶರ್ಮಾ ಪ್ರಶ್ನೆ ಮಾಡಿದ್ದಾರೆ.
ಐಎಸ್ಎಫ್ ಮತ್ತು ಇತರ ಶಕ್ತಿಗಳಂತಹ ಪಕ್ಷಗಳೊಂದಿಗಿನ ಮೈತ್ರಿ ಕಾಂಗ್ರೆಸ್ ಪಕ್ಷದ ಪ್ರಮುಖ ಸಿದ್ಧಾಂತ ಮತ್ತು ಪಕ್ಷದ ಆತ್ಮವನ್ನು ರೂಪಿಸುವ ಗಾಂಧಿವಾದಿ ಮತ್ತು ನೆಹರೂವಿಯನ್ ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
“ಕೋಮುವಾದಿಗಳ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಲು ಸಾಧ್ಯವಿಲ್ಲ. ಧರ್ಮ ಮತ್ತು ಬಣ್ಣವನ್ನು ಲೆಕ್ಕಿಸದೆ ಹೋರಾಟ ನಡೆಸಬೇಕು. ಪಶ್ಚಿಮ ಬಂಗಾಳದಲ್ಲಿ ಐಎಸ್ಎಫ್ ಜೊತೆ ಕಾಂಗ್ರೆಸ್ ಪಕ್ಷದ ಮೈತ್ರಿ ನೋವಿನ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಅವರು ನೋವು ತೋಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.